ಮತ್ತೆ ಕಾಡುತ್ತಿದೆಯಾ ಮಹಾಮಾರಿ ಕೊರೋನಾ..? | ಹೆಚ್ಚಿನವರಿಗೆ ಕೆಮ್ಮು ನೆಗಡಿ ಬಾಧೆ..! | ಇದೇನು ಕೆಮ್ಮು, ನೆಗಡಿ ? | ಇರಲಿ ಎಚ್ಚರ |

March 5, 2023
12:05 PM

ಎರಡು ವರ್ಷಗಳ ಕಾಲ ಇಡೀ ವಿಶ್ವವನ್ನೆ ಹಿಂಡಿ ಹಿಪ್ಪೆ ಮಾಡಿದ್ದ  ಕೊರೋನಾ ಮಾಹಾಮಾರಿ ಮಾದರಿಯಲ್ಲೇ ಈಗ ಮತ್ತೆ ಶೀತ, ಕಫ ಒಕ್ಕರಿಸುವ ಭೀತಿ ಎದುರಾಗಿದೆ. ಆದರೆ ಈಗ ಕೊರೋನಾ ಇಲ್ಲ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದೆ. ಆದರೆ ಭಾರಿ ಸಂಖ್ಯೆಯಲ್ಲಿ ಜನ ಶೀತ, ಕೆಮ್ಮು ನೆಗಡಿಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ.

ದೇಶದಲ್ಲಿ ಹೊಸ ವೈರಾಣು ಎಚ್3ಎನ್2 ಪ್ರಬೇಧ ಪತ್ತೆಯಾಗಿದೆ. ಆದರೆ, ರಾಜ್ಯದಲ್ಲಿ ಇನ್ನೂ ಪತ್ತೆಯಾಗಿಲ್ಲ. ಈಗಾಗಲೇ ಅನುಸರಿಸಬೇಕಾದ ಕ್ರಮಗಳ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ನಡೆಯುವ ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು  ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ವೈರಾಣುವಿನಿಂದ ದೀರ್ಘಾವಧಿಯ ಕೆಮ್ಮು ಇರಲಿದೆ. ಆದರೆ, ರಾಜ್ಯದಲ್ಲಿ ಎಚ್3ಎನ್2 ಪ್ರಭೇಧ ಪತ್ತೆಯಾಗಿಲ್ಲ, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈಗಿನ ಹವಾಮಾನ ವೈಪರೀತ್ಯದ ಕಾರಣದಿಂದ ಆರೋಗ್ಯದಲ್ಲೂ ವ್ಯತ್ಯಾಸ ಕಂಡುಬರುತ್ತಿದೆ. ವಿಪರೀತ ಉಷ್ಣತೆಯ ಕಾರಣದಿಂದ ಸಾಮಾನ್ಯವಾಗಿ ಈ ಸಮಯದಲ್ಲಿ ಜ್ವರ, ಕೆಮ್ಮು, ಕಫ ಕಂಡುಬರುತ್ತದೆ. ಆದರೆ ಎರಡು ವರ್ಷಗಳ ಹಿಂದೆ ಬಾಧಿಸಿರುವ ಕೊರೋನಾ ಈಗ ಎಲ್ಲದಕ್ಕೂ ಭಯ ತಂದಿರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror