ಸುದ್ದಿಗಳು

ಮತ್ತೆ ಕಾಡುತ್ತಿದೆಯಾ ಮಹಾಮಾರಿ ಕೊರೋನಾ..? | ಹೆಚ್ಚಿನವರಿಗೆ ಕೆಮ್ಮು ನೆಗಡಿ ಬಾಧೆ..! | ಇದೇನು ಕೆಮ್ಮು, ನೆಗಡಿ ? | ಇರಲಿ ಎಚ್ಚರ |

Share

ಎರಡು ವರ್ಷಗಳ ಕಾಲ ಇಡೀ ವಿಶ್ವವನ್ನೆ ಹಿಂಡಿ ಹಿಪ್ಪೆ ಮಾಡಿದ್ದ  ಕೊರೋನಾ ಮಾಹಾಮಾರಿ ಮಾದರಿಯಲ್ಲೇ ಈಗ ಮತ್ತೆ ಶೀತ, ಕಫ ಒಕ್ಕರಿಸುವ ಭೀತಿ ಎದುರಾಗಿದೆ. ಆದರೆ ಈಗ ಕೊರೋನಾ ಇಲ್ಲ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದೆ. ಆದರೆ ಭಾರಿ ಸಂಖ್ಯೆಯಲ್ಲಿ ಜನ ಶೀತ, ಕೆಮ್ಮು ನೆಗಡಿಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ.

ದೇಶದಲ್ಲಿ ಹೊಸ ವೈರಾಣು ಎಚ್3ಎನ್2 ಪ್ರಬೇಧ ಪತ್ತೆಯಾಗಿದೆ. ಆದರೆ, ರಾಜ್ಯದಲ್ಲಿ ಇನ್ನೂ ಪತ್ತೆಯಾಗಿಲ್ಲ. ಈಗಾಗಲೇ ಅನುಸರಿಸಬೇಕಾದ ಕ್ರಮಗಳ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ನಡೆಯುವ ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು  ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ವೈರಾಣುವಿನಿಂದ ದೀರ್ಘಾವಧಿಯ ಕೆಮ್ಮು ಇರಲಿದೆ. ಆದರೆ, ರಾಜ್ಯದಲ್ಲಿ ಎಚ್3ಎನ್2 ಪ್ರಭೇಧ ಪತ್ತೆಯಾಗಿಲ್ಲ, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈಗಿನ ಹವಾಮಾನ ವೈಪರೀತ್ಯದ ಕಾರಣದಿಂದ ಆರೋಗ್ಯದಲ್ಲೂ ವ್ಯತ್ಯಾಸ ಕಂಡುಬರುತ್ತಿದೆ. ವಿಪರೀತ ಉಷ್ಣತೆಯ ಕಾರಣದಿಂದ ಸಾಮಾನ್ಯವಾಗಿ ಈ ಸಮಯದಲ್ಲಿ ಜ್ವರ, ಕೆಮ್ಮು, ಕಫ ಕಂಡುಬರುತ್ತದೆ. ಆದರೆ ಎರಡು ವರ್ಷಗಳ ಹಿಂದೆ ಬಾಧಿಸಿರುವ ಕೊರೋನಾ ಈಗ ಎಲ್ಲದಕ್ಕೂ ಭಯ ತಂದಿರಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

16 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

16 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

16 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

24 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

24 hours ago