ಸುದ್ದಿಗಳು

ಮತ್ತೆ ಕಾಡುತ್ತಿದೆಯಾ ಮಹಾಮಾರಿ ಕೊರೋನಾ..? | ಹೆಚ್ಚಿನವರಿಗೆ ಕೆಮ್ಮು ನೆಗಡಿ ಬಾಧೆ..! | ಇದೇನು ಕೆಮ್ಮು, ನೆಗಡಿ ? | ಇರಲಿ ಎಚ್ಚರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎರಡು ವರ್ಷಗಳ ಕಾಲ ಇಡೀ ವಿಶ್ವವನ್ನೆ ಹಿಂಡಿ ಹಿಪ್ಪೆ ಮಾಡಿದ್ದ  ಕೊರೋನಾ ಮಾಹಾಮಾರಿ ಮಾದರಿಯಲ್ಲೇ ಈಗ ಮತ್ತೆ ಶೀತ, ಕಫ ಒಕ್ಕರಿಸುವ ಭೀತಿ ಎದುರಾಗಿದೆ. ಆದರೆ ಈಗ ಕೊರೋನಾ ಇಲ್ಲ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದೆ. ಆದರೆ ಭಾರಿ ಸಂಖ್ಯೆಯಲ್ಲಿ ಜನ ಶೀತ, ಕೆಮ್ಮು ನೆಗಡಿಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ.

Advertisement

ದೇಶದಲ್ಲಿ ಹೊಸ ವೈರಾಣು ಎಚ್3ಎನ್2 ಪ್ರಬೇಧ ಪತ್ತೆಯಾಗಿದೆ. ಆದರೆ, ರಾಜ್ಯದಲ್ಲಿ ಇನ್ನೂ ಪತ್ತೆಯಾಗಿಲ್ಲ. ಈಗಾಗಲೇ ಅನುಸರಿಸಬೇಕಾದ ಕ್ರಮಗಳ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ನಡೆಯುವ ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು  ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ವೈರಾಣುವಿನಿಂದ ದೀರ್ಘಾವಧಿಯ ಕೆಮ್ಮು ಇರಲಿದೆ. ಆದರೆ, ರಾಜ್ಯದಲ್ಲಿ ಎಚ್3ಎನ್2 ಪ್ರಭೇಧ ಪತ್ತೆಯಾಗಿಲ್ಲ, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈಗಿನ ಹವಾಮಾನ ವೈಪರೀತ್ಯದ ಕಾರಣದಿಂದ ಆರೋಗ್ಯದಲ್ಲೂ ವ್ಯತ್ಯಾಸ ಕಂಡುಬರುತ್ತಿದೆ. ವಿಪರೀತ ಉಷ್ಣತೆಯ ಕಾರಣದಿಂದ ಸಾಮಾನ್ಯವಾಗಿ ಈ ಸಮಯದಲ್ಲಿ ಜ್ವರ, ಕೆಮ್ಮು, ಕಫ ಕಂಡುಬರುತ್ತದೆ. ಆದರೆ ಎರಡು ವರ್ಷಗಳ ಹಿಂದೆ ಬಾಧಿಸಿರುವ ಕೊರೋನಾ ಈಗ ಎಲ್ಲದಕ್ಕೂ ಭಯ ತಂದಿರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

1 day ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

1 day ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

1 day ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

1 day ago