Advertisement
ಸುದ್ದಿಗಳು

ಮತ್ತೆ ಕಾಡುತ್ತಿದೆಯಾ ಮಹಾಮಾರಿ ಕೊರೋನಾ..? | ಹೆಚ್ಚಿನವರಿಗೆ ಕೆಮ್ಮು ನೆಗಡಿ ಬಾಧೆ..! | ಇದೇನು ಕೆಮ್ಮು, ನೆಗಡಿ ? | ಇರಲಿ ಎಚ್ಚರ |

Share

ಎರಡು ವರ್ಷಗಳ ಕಾಲ ಇಡೀ ವಿಶ್ವವನ್ನೆ ಹಿಂಡಿ ಹಿಪ್ಪೆ ಮಾಡಿದ್ದ  ಕೊರೋನಾ ಮಾಹಾಮಾರಿ ಮಾದರಿಯಲ್ಲೇ ಈಗ ಮತ್ತೆ ಶೀತ, ಕಫ ಒಕ್ಕರಿಸುವ ಭೀತಿ ಎದುರಾಗಿದೆ. ಆದರೆ ಈಗ ಕೊರೋನಾ ಇಲ್ಲ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದೆ. ಆದರೆ ಭಾರಿ ಸಂಖ್ಯೆಯಲ್ಲಿ ಜನ ಶೀತ, ಕೆಮ್ಮು ನೆಗಡಿಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ.

ದೇಶದಲ್ಲಿ ಹೊಸ ವೈರಾಣು ಎಚ್3ಎನ್2 ಪ್ರಬೇಧ ಪತ್ತೆಯಾಗಿದೆ. ಆದರೆ, ರಾಜ್ಯದಲ್ಲಿ ಇನ್ನೂ ಪತ್ತೆಯಾಗಿಲ್ಲ. ಈಗಾಗಲೇ ಅನುಸರಿಸಬೇಕಾದ ಕ್ರಮಗಳ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ನಡೆಯುವ ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು  ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ವೈರಾಣುವಿನಿಂದ ದೀರ್ಘಾವಧಿಯ ಕೆಮ್ಮು ಇರಲಿದೆ. ಆದರೆ, ರಾಜ್ಯದಲ್ಲಿ ಎಚ್3ಎನ್2 ಪ್ರಭೇಧ ಪತ್ತೆಯಾಗಿಲ್ಲ, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈಗಿನ ಹವಾಮಾನ ವೈಪರೀತ್ಯದ ಕಾರಣದಿಂದ ಆರೋಗ್ಯದಲ್ಲೂ ವ್ಯತ್ಯಾಸ ಕಂಡುಬರುತ್ತಿದೆ. ವಿಪರೀತ ಉಷ್ಣತೆಯ ಕಾರಣದಿಂದ ಸಾಮಾನ್ಯವಾಗಿ ಈ ಸಮಯದಲ್ಲಿ ಜ್ವರ, ಕೆಮ್ಮು, ಕಫ ಕಂಡುಬರುತ್ತದೆ. ಆದರೆ ಎರಡು ವರ್ಷಗಳ ಹಿಂದೆ ಬಾಧಿಸಿರುವ ಕೊರೋನಾ ಈಗ ಎಲ್ಲದಕ್ಕೂ ಭಯ ತಂದಿರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

12 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

21 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

22 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago