ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಸೋಮವಾರ ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದಲ್ಲಿ H3N2 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. H3N2 ಸೋಂಕಿನ ಬಗ್ಗೆ ಯಾರೂ ಗಾಬರಿಪಡಬೇಕಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಂದಿನಿಂದಲೇ ಆರೋಗ್ಯ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ರಾಜ್ಯದಲ್ಲಿ H3N2 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ 26 ಸೋಂಕು ಪತ್ತೆಯಾಗಿವೆ. ಮಕ್ಕಳು ಹಾಗೂ ಗರ್ಭಿಣಿಯರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.
ದೀರ್ಘಕಾಲದಿಂದ ಕೆಮ್ಮು ಹಾಗೂ ಜ್ವರದ ಲಕ್ಷಣ ಇದ್ದರೆ H3N2 ವೈರಸ್ ಕಾರಣವಾಗಿರಬಹುದು. ದೇಶಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ರೋಗಲಕ್ಷಣ ಉಂಟಾದರೆ ಪರೀಕ್ಷೆ ನಡೆಸಿ ಔಷಧಿ ಪಡೆಯುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಎಚ್ಚರಿಕೆ ನೀಡಿದೆ.
ಬೇಸಿಗೆ ಪ್ರವೇಶದಿಂದ ತಾಪಮಾನ ಏರಿಕೆಯ ಕಾರಣದಿಂದ ಬಿಸಿಗಾಳಿಗೆ ಸಾಕಷ್ಟು ಜನರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡಿ. ಹೆಚ್ಚು ನೀರನ್ನು ಪ್ರತಿನಿತ್ಯ ಕುಡಿಯಬೇಕು ಎಂದು ಮನವಿ ಮಾಡಿದರು. H3N2 ಇದು ಅಪಾಯಕಾರಿ ಅಲ್ಲ, ಕೋವಿಡ್ ಬಂದವರಿಗೆ ಸ್ವಲ್ಪ ದೀರ್ಘ ಕಾಲದ ಕೆಮ್ಮು ಇರುತ್ತದೆ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಆದರೆ ಸಾಂಕ್ರಾಮಿಕ ಹರಡುವ ಅಪಾಯ ಇದೆ ಎಂದು ಹೇಳಿದರು.
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…