ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಸೋಮವಾರ ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದಲ್ಲಿ H3N2 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. H3N2 ಸೋಂಕಿನ ಬಗ್ಗೆ ಯಾರೂ ಗಾಬರಿಪಡಬೇಕಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಂದಿನಿಂದಲೇ ಆರೋಗ್ಯ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ರಾಜ್ಯದಲ್ಲಿ H3N2 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ 26 ಸೋಂಕು ಪತ್ತೆಯಾಗಿವೆ. ಮಕ್ಕಳು ಹಾಗೂ ಗರ್ಭಿಣಿಯರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.
ದೀರ್ಘಕಾಲದಿಂದ ಕೆಮ್ಮು ಹಾಗೂ ಜ್ವರದ ಲಕ್ಷಣ ಇದ್ದರೆ H3N2 ವೈರಸ್ ಕಾರಣವಾಗಿರಬಹುದು. ದೇಶಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ರೋಗಲಕ್ಷಣ ಉಂಟಾದರೆ ಪರೀಕ್ಷೆ ನಡೆಸಿ ಔಷಧಿ ಪಡೆಯುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಎಚ್ಚರಿಕೆ ನೀಡಿದೆ.
ಬೇಸಿಗೆ ಪ್ರವೇಶದಿಂದ ತಾಪಮಾನ ಏರಿಕೆಯ ಕಾರಣದಿಂದ ಬಿಸಿಗಾಳಿಗೆ ಸಾಕಷ್ಟು ಜನರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡಿ. ಹೆಚ್ಚು ನೀರನ್ನು ಪ್ರತಿನಿತ್ಯ ಕುಡಿಯಬೇಕು ಎಂದು ಮನವಿ ಮಾಡಿದರು. H3N2 ಇದು ಅಪಾಯಕಾರಿ ಅಲ್ಲ, ಕೋವಿಡ್ ಬಂದವರಿಗೆ ಸ್ವಲ್ಪ ದೀರ್ಘ ಕಾಲದ ಕೆಮ್ಮು ಇರುತ್ತದೆ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಆದರೆ ಸಾಂಕ್ರಾಮಿಕ ಹರಡುವ ಅಪಾಯ ಇದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …