Advertisement
ಸುದ್ದಿಗಳು

ರಾಜ್ಯದಲ್ಲಿ H3N2 ಸೋಂಕು ಪತ್ತೆ | 26 ಜನರಲ್ಲಿ ಪತ್ತೆಯಾದ ವೈರಸ್‌ | ಎಚ್ಚರದಿಂದಿರಿ ಇಲಾಖೆ ಸೂಚನೆ |

Share

ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಸೋಮವಾರ ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.

Advertisement

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದಲ್ಲಿ H3N2 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. H3N2 ಸೋಂಕಿನ ಬಗ್ಗೆ ಯಾರೂ ಗಾಬರಿಪಡಬೇಕಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಂದಿನಿಂದಲೇ ಆರೋಗ್ಯ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ರಾಜ್ಯದಲ್ಲಿ H3N2 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ 26 ಸೋಂಕು ಪತ್ತೆಯಾಗಿವೆ. ಮಕ್ಕಳು ಹಾಗೂ ಗರ್ಭಿಣಿಯರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

ದೀರ್ಘಕಾಲದಿಂದ ಕೆಮ್ಮು ಹಾಗೂ ಜ್ವರದ ಲಕ್ಷಣ ಇದ್ದರೆ H3N2 ವೈರಸ್ ಕಾರಣವಾಗಿರಬಹುದು. ದೇಶಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ರೋಗಲಕ್ಷಣ ಉಂಟಾದರೆ ಪರೀಕ್ಷೆ ನಡೆಸಿ ಔಷಧಿ ಪಡೆಯುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಎಚ್ಚರಿಕೆ ನೀಡಿದೆ.

ಬೇಸಿಗೆ ಪ್ರವೇಶದಿಂದ ತಾಪಮಾನ ಏರಿಕೆಯ ಕಾರಣದಿಂದ  ಬಿಸಿ‌ಗಾಳಿಗೆ ಸಾಕಷ್ಟು ಜನರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡಿ.‌ ಹೆಚ್ಚು ನೀರನ್ನು ಪ್ರತಿನಿತ್ಯ ಕುಡಿಯಬೇಕು ಎಂದು ಮನವಿ ಮಾಡಿದರು. H3N2 ಇದು ಅಪಾಯಕಾರಿ ಅಲ್ಲ, ಕೋವಿಡ್ ಬಂದವರಿಗೆ ಸ್ವಲ್ಪ ದೀರ್ಘ ಕಾಲದ ಕೆಮ್ಮು ಇರುತ್ತದೆ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಆದರೆ ಸಾಂಕ್ರಾಮಿಕ ಹರಡುವ ಅಪಾಯ ಇದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

13 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

13 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

13 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

13 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

2 days ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

3 days ago