Advertisement
ಸುದ್ದಿಗಳು

ರಾಜ್ಯದಲ್ಲಿ H3N2 ಸೋಂಕು ಪತ್ತೆ | 26 ಜನರಲ್ಲಿ ಪತ್ತೆಯಾದ ವೈರಸ್‌ | ಎಚ್ಚರದಿಂದಿರಿ ಇಲಾಖೆ ಸೂಚನೆ |

Share

ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಸೋಮವಾರ ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದಲ್ಲಿ H3N2 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. H3N2 ಸೋಂಕಿನ ಬಗ್ಗೆ ಯಾರೂ ಗಾಬರಿಪಡಬೇಕಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಂದಿನಿಂದಲೇ ಆರೋಗ್ಯ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ರಾಜ್ಯದಲ್ಲಿ H3N2 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ 26 ಸೋಂಕು ಪತ್ತೆಯಾಗಿವೆ. ಮಕ್ಕಳು ಹಾಗೂ ಗರ್ಭಿಣಿಯರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

ದೀರ್ಘಕಾಲದಿಂದ ಕೆಮ್ಮು ಹಾಗೂ ಜ್ವರದ ಲಕ್ಷಣ ಇದ್ದರೆ H3N2 ವೈರಸ್ ಕಾರಣವಾಗಿರಬಹುದು. ದೇಶಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ರೋಗಲಕ್ಷಣ ಉಂಟಾದರೆ ಪರೀಕ್ಷೆ ನಡೆಸಿ ಔಷಧಿ ಪಡೆಯುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಎಚ್ಚರಿಕೆ ನೀಡಿದೆ.

ಬೇಸಿಗೆ ಪ್ರವೇಶದಿಂದ ತಾಪಮಾನ ಏರಿಕೆಯ ಕಾರಣದಿಂದ  ಬಿಸಿ‌ಗಾಳಿಗೆ ಸಾಕಷ್ಟು ಜನರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡಿ.‌ ಹೆಚ್ಚು ನೀರನ್ನು ಪ್ರತಿನಿತ್ಯ ಕುಡಿಯಬೇಕು ಎಂದು ಮನವಿ ಮಾಡಿದರು. H3N2 ಇದು ಅಪಾಯಕಾರಿ ಅಲ್ಲ, ಕೋವಿಡ್ ಬಂದವರಿಗೆ ಸ್ವಲ್ಪ ದೀರ್ಘ ಕಾಲದ ಕೆಮ್ಮು ಇರುತ್ತದೆ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಆದರೆ ಸಾಂಕ್ರಾಮಿಕ ಹರಡುವ ಅಪಾಯ ಇದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

8 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

10 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

16 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

17 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago