Advertisement
ಸುದ್ದಿಗಳು

ರಾಜ್ಯದಲ್ಲಿ H3N2 ಸೋಂಕು ಪತ್ತೆ | 26 ಜನರಲ್ಲಿ ಪತ್ತೆಯಾದ ವೈರಸ್‌ | ಎಚ್ಚರದಿಂದಿರಿ ಇಲಾಖೆ ಸೂಚನೆ |

Share

ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಸೋಮವಾರ ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದಲ್ಲಿ H3N2 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. H3N2 ಸೋಂಕಿನ ಬಗ್ಗೆ ಯಾರೂ ಗಾಬರಿಪಡಬೇಕಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಂದಿನಿಂದಲೇ ಆರೋಗ್ಯ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ರಾಜ್ಯದಲ್ಲಿ H3N2 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ 26 ಸೋಂಕು ಪತ್ತೆಯಾಗಿವೆ. ಮಕ್ಕಳು ಹಾಗೂ ಗರ್ಭಿಣಿಯರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

ದೀರ್ಘಕಾಲದಿಂದ ಕೆಮ್ಮು ಹಾಗೂ ಜ್ವರದ ಲಕ್ಷಣ ಇದ್ದರೆ H3N2 ವೈರಸ್ ಕಾರಣವಾಗಿರಬಹುದು. ದೇಶಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ರೋಗಲಕ್ಷಣ ಉಂಟಾದರೆ ಪರೀಕ್ಷೆ ನಡೆಸಿ ಔಷಧಿ ಪಡೆಯುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಎಚ್ಚರಿಕೆ ನೀಡಿದೆ.

ಬೇಸಿಗೆ ಪ್ರವೇಶದಿಂದ ತಾಪಮಾನ ಏರಿಕೆಯ ಕಾರಣದಿಂದ  ಬಿಸಿ‌ಗಾಳಿಗೆ ಸಾಕಷ್ಟು ಜನರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡಿ.‌ ಹೆಚ್ಚು ನೀರನ್ನು ಪ್ರತಿನಿತ್ಯ ಕುಡಿಯಬೇಕು ಎಂದು ಮನವಿ ಮಾಡಿದರು. H3N2 ಇದು ಅಪಾಯಕಾರಿ ಅಲ್ಲ, ಕೋವಿಡ್ ಬಂದವರಿಗೆ ಸ್ವಲ್ಪ ದೀರ್ಘ ಕಾಲದ ಕೆಮ್ಮು ಇರುತ್ತದೆ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಆದರೆ ಸಾಂಕ್ರಾಮಿಕ ಹರಡುವ ಅಪಾಯ ಇದೆ ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago