ರಾಜ್ಯದ ಹಲವೆಡೆ ಆಲಿಕಲ್ಲು ಮಳೆ : ಕಾಶ್ಮೀರದಂತಾದ ಕೆಲ ಜಿಲ್ಲೆಗಳು

March 18, 2023
12:40 PM

ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಭಾಗದ ಗ್ರಾಮದಲ್ಲಿ ಮೊದಲ ಮಳೆ ಜೊತೆ ಆಲಿಕಲ್ಲು ಮಳೆ ಸುರಿದಿದೆ.

ಗುರುವಾರ ಸುರಿದ ಆಲಿಕಲ್ಲು ಮಳೆ ತಂಪೆರೆದಿದೆ. ಬೇಸಿಗೆಯ ಆರಂಭದಿಂದಲೇ ಪ್ರಖರ ಬಿಸಿಲಿನಿಂದ ಬಸವಳಿದಿದ್ದ. ಗಡಿ ಗ್ರಾಮಗಳಲ್ಲಿ ಮಧ್ಯಾಹ್ನ ಆಲಿಕಲ್ಲು ಮಳೆಯಾಗಿದೆ. ಗ್ರಾಮಗಳಲ್ಲಿ ಮಂಜಿನಹಾಸಿನಂತೆ ಅಲಿಕಲ್ಲುಗಳು ರಾಶಿಯಾಗಿದ್ದವು.

ಬೀದರ್ ಜಿಲ್ಲೆಯ ವಿವಿಧೆಡೆ ಗುಡುಗುಮಿಂಚಿನ ಆರ್ಭಟ ಇತ್ತು. ಕೆಲವೆಡೆ ಆಲಿಕಲ್ಲುಗಳು ಬಿದ್ದಿವೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಆಲಿಕಲ್ಲು ಸಹಿತ ಕೋಲಾರ ಜಿಲ್ಲೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿರುವುದು ವರದಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror