ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಭಾಗದ ಗ್ರಾಮದಲ್ಲಿ ಮೊದಲ ಮಳೆ ಜೊತೆ ಆಲಿಕಲ್ಲು ಮಳೆ ಸುರಿದಿದೆ.
ಗುರುವಾರ ಸುರಿದ ಆಲಿಕಲ್ಲು ಮಳೆ ತಂಪೆರೆದಿದೆ. ಬೇಸಿಗೆಯ ಆರಂಭದಿಂದಲೇ ಪ್ರಖರ ಬಿಸಿಲಿನಿಂದ ಬಸವಳಿದಿದ್ದ. ಗಡಿ ಗ್ರಾಮಗಳಲ್ಲಿ ಮಧ್ಯಾಹ್ನ ಆಲಿಕಲ್ಲು ಮಳೆಯಾಗಿದೆ. ಗ್ರಾಮಗಳಲ್ಲಿ ಮಂಜಿನಹಾಸಿನಂತೆ ಅಲಿಕಲ್ಲುಗಳು ರಾಶಿಯಾಗಿದ್ದವು.
ಬೀದರ್ ಜಿಲ್ಲೆಯ ವಿವಿಧೆಡೆ ಗುಡುಗು–ಮಿಂಚಿನ ಆರ್ಭಟ ಇತ್ತು. ಕೆಲವೆಡೆ ಆಲಿಕಲ್ಲುಗಳು ಬಿದ್ದಿವೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಆಲಿಕಲ್ಲು ಸಹಿತ ಕೋಲಾರ ಜಿಲ್ಲೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿರುವುದು ವರದಿಯಾಗಿದೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…