ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಭಾಗದ ಗ್ರಾಮದಲ್ಲಿ ಮೊದಲ ಮಳೆ ಜೊತೆ ಆಲಿಕಲ್ಲು ಮಳೆ ಸುರಿದಿದೆ.
ಗುರುವಾರ ಸುರಿದ ಆಲಿಕಲ್ಲು ಮಳೆ ತಂಪೆರೆದಿದೆ. ಬೇಸಿಗೆಯ ಆರಂಭದಿಂದಲೇ ಪ್ರಖರ ಬಿಸಿಲಿನಿಂದ ಬಸವಳಿದಿದ್ದ. ಗಡಿ ಗ್ರಾಮಗಳಲ್ಲಿ ಮಧ್ಯಾಹ್ನ ಆಲಿಕಲ್ಲು ಮಳೆಯಾಗಿದೆ. ಗ್ರಾಮಗಳಲ್ಲಿ ಮಂಜಿನಹಾಸಿನಂತೆ ಅಲಿಕಲ್ಲುಗಳು ರಾಶಿಯಾಗಿದ್ದವು.
ಬೀದರ್ ಜಿಲ್ಲೆಯ ವಿವಿಧೆಡೆ ಗುಡುಗು–ಮಿಂಚಿನ ಆರ್ಭಟ ಇತ್ತು. ಕೆಲವೆಡೆ ಆಲಿಕಲ್ಲುಗಳು ಬಿದ್ದಿವೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಆಲಿಕಲ್ಲು ಸಹಿತ ಕೋಲಾರ ಜಿಲ್ಲೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿರುವುದು ವರದಿಯಾಗಿದೆ.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…