ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಭಾಗದ ಗ್ರಾಮದಲ್ಲಿ ಮೊದಲ ಮಳೆ ಜೊತೆ ಆಲಿಕಲ್ಲು ಮಳೆ ಸುರಿದಿದೆ.
ಗುರುವಾರ ಸುರಿದ ಆಲಿಕಲ್ಲು ಮಳೆ ತಂಪೆರೆದಿದೆ. ಬೇಸಿಗೆಯ ಆರಂಭದಿಂದಲೇ ಪ್ರಖರ ಬಿಸಿಲಿನಿಂದ ಬಸವಳಿದಿದ್ದ. ಗಡಿ ಗ್ರಾಮಗಳಲ್ಲಿ ಮಧ್ಯಾಹ್ನ ಆಲಿಕಲ್ಲು ಮಳೆಯಾಗಿದೆ. ಗ್ರಾಮಗಳಲ್ಲಿ ಮಂಜಿನಹಾಸಿನಂತೆ ಅಲಿಕಲ್ಲುಗಳು ರಾಶಿಯಾಗಿದ್ದವು.
ಬೀದರ್ ಜಿಲ್ಲೆಯ ವಿವಿಧೆಡೆ ಗುಡುಗು–ಮಿಂಚಿನ ಆರ್ಭಟ ಇತ್ತು. ಕೆಲವೆಡೆ ಆಲಿಕಲ್ಲುಗಳು ಬಿದ್ದಿವೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಆಲಿಕಲ್ಲು ಸಹಿತ ಕೋಲಾರ ಜಿಲ್ಲೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿರುವುದು ವರದಿಯಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…