ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಭಾಗದ ಗ್ರಾಮದಲ್ಲಿ ಮೊದಲ ಮಳೆ ಜೊತೆ ಆಲಿಕಲ್ಲು ಮಳೆ ಸುರಿದಿದೆ.
ಗುರುವಾರ ಸುರಿದ ಆಲಿಕಲ್ಲು ಮಳೆ ತಂಪೆರೆದಿದೆ. ಬೇಸಿಗೆಯ ಆರಂಭದಿಂದಲೇ ಪ್ರಖರ ಬಿಸಿಲಿನಿಂದ ಬಸವಳಿದಿದ್ದ. ಗಡಿ ಗ್ರಾಮಗಳಲ್ಲಿ ಮಧ್ಯಾಹ್ನ ಆಲಿಕಲ್ಲು ಮಳೆಯಾಗಿದೆ. ಗ್ರಾಮಗಳಲ್ಲಿ ಮಂಜಿನಹಾಸಿನಂತೆ ಅಲಿಕಲ್ಲುಗಳು ರಾಶಿಯಾಗಿದ್ದವು.
ಬೀದರ್ ಜಿಲ್ಲೆಯ ವಿವಿಧೆಡೆ ಗುಡುಗು–ಮಿಂಚಿನ ಆರ್ಭಟ ಇತ್ತು. ಕೆಲವೆಡೆ ಆಲಿಕಲ್ಲುಗಳು ಬಿದ್ದಿವೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಆಲಿಕಲ್ಲು ಸಹಿತ ಕೋಲಾರ ಜಿಲ್ಲೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿರುವುದು ವರದಿಯಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…