ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಭಾಗದ ಗ್ರಾಮದಲ್ಲಿ ಮೊದಲ ಮಳೆ ಜೊತೆ ಆಲಿಕಲ್ಲು ಮಳೆ ಸುರಿದಿದೆ.
ಗುರುವಾರ ಸುರಿದ ಆಲಿಕಲ್ಲು ಮಳೆ ತಂಪೆರೆದಿದೆ. ಬೇಸಿಗೆಯ ಆರಂಭದಿಂದಲೇ ಪ್ರಖರ ಬಿಸಿಲಿನಿಂದ ಬಸವಳಿದಿದ್ದ. ಗಡಿ ಗ್ರಾಮಗಳಲ್ಲಿ ಮಧ್ಯಾಹ್ನ ಆಲಿಕಲ್ಲು ಮಳೆಯಾಗಿದೆ. ಗ್ರಾಮಗಳಲ್ಲಿ ಮಂಜಿನಹಾಸಿನಂತೆ ಅಲಿಕಲ್ಲುಗಳು ರಾಶಿಯಾಗಿದ್ದವು.
ಬೀದರ್ ಜಿಲ್ಲೆಯ ವಿವಿಧೆಡೆ ಗುಡುಗು–ಮಿಂಚಿನ ಆರ್ಭಟ ಇತ್ತು. ಕೆಲವೆಡೆ ಆಲಿಕಲ್ಲುಗಳು ಬಿದ್ದಿವೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಆಲಿಕಲ್ಲು ಸಹಿತ ಕೋಲಾರ ಜಿಲ್ಲೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿರುವುದು ವರದಿಯಾಗಿದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.