ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.
ಆದರ್ಶ ಯೂತ್ ಕ್ಲಬ್ ನ ಗೌರವದ್ಯಕ್ಷರಾದ ದಿನೇಶ್ ಹಾಲೆಮಜಲು ಊರಿನ ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪ್ಪಾಡಿ. ಪಂಚಾಯತ್ ಸದಸ್ಯೆ ಅನಿತಾ ರಮಾನಂದ ಇವರಿಂದ ದೀಪ ಪ್ರಜ್ವಲನೆಗೊಂಡು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ನಂತರ ಸಮರೋಪ ಕಾರ್ಯಕ್ರಮದಲ್ಲಿ ಕೃಷಿಕ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು.
ವೇದಿಕೆಯಲ್ಲಿ ಕ್ಲಬ್ ನ ಅದ್ಯಕ್ಷರಾದ ಸತೀಶ್ ಬಂಬುಳಿ, ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ಕೋಶಾಧಿಕಾರಿ ಮುರಳಿ ನಳಿಯಾರು, ಪಂಚಾಯತ್ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ದಾನಿಗಳಾದ ದುಗ್ಗಪ್ಪ ಮಾಸ್ತರ್ ಕುಳ್ಳಂಪ್ಪಾಡಿ, ಪುಷ್ಪ ದೇವಿದಾಸ್ ಬುಡ್ಲೆಗುತ್ತು, ಕಾರ್ಯದರ್ಶಿ ದೀಪಕ್ ಕುಂಭಡ್ಕ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹರಿಶ್ಚಂದ್ರ ಕುಳ್ಳಂಪ್ಪಾಡಿ ಸ್ವಾಗತಿಸಿ ಆಕರ್ಷ್ ಕುಳ್ಳಂಪ್ಪಾಡಿ ವಂದಿಸಿದರು. ಪೂರ್ವದ್ಯಕ್ಷರಾದ ಶಿವಪ್ರಸಾದ್ ಹಾಲೆಮಜಲು, ದುರ್ಗದಾಸ್ ಕಡ್ಲಾರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…