ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.
ಆದರ್ಶ ಯೂತ್ ಕ್ಲಬ್ ನ ಗೌರವದ್ಯಕ್ಷರಾದ ದಿನೇಶ್ ಹಾಲೆಮಜಲು ಊರಿನ ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪ್ಪಾಡಿ. ಪಂಚಾಯತ್ ಸದಸ್ಯೆ ಅನಿತಾ ರಮಾನಂದ ಇವರಿಂದ ದೀಪ ಪ್ರಜ್ವಲನೆಗೊಂಡು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ನಂತರ ಸಮರೋಪ ಕಾರ್ಯಕ್ರಮದಲ್ಲಿ ಕೃಷಿಕ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು.
ವೇದಿಕೆಯಲ್ಲಿ ಕ್ಲಬ್ ನ ಅದ್ಯಕ್ಷರಾದ ಸತೀಶ್ ಬಂಬುಳಿ, ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ಕೋಶಾಧಿಕಾರಿ ಮುರಳಿ ನಳಿಯಾರು, ಪಂಚಾಯತ್ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ದಾನಿಗಳಾದ ದುಗ್ಗಪ್ಪ ಮಾಸ್ತರ್ ಕುಳ್ಳಂಪ್ಪಾಡಿ, ಪುಷ್ಪ ದೇವಿದಾಸ್ ಬುಡ್ಲೆಗುತ್ತು, ಕಾರ್ಯದರ್ಶಿ ದೀಪಕ್ ಕುಂಭಡ್ಕ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹರಿಶ್ಚಂದ್ರ ಕುಳ್ಳಂಪ್ಪಾಡಿ ಸ್ವಾಗತಿಸಿ ಆಕರ್ಷ್ ಕುಳ್ಳಂಪ್ಪಾಡಿ ವಂದಿಸಿದರು. ಪೂರ್ವದ್ಯಕ್ಷರಾದ ಶಿವಪ್ರಸಾದ್ ಹಾಲೆಮಜಲು, ದುರ್ಗದಾಸ್ ಕಡ್ಲಾರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…