ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.
ಆದರ್ಶ ಯೂತ್ ಕ್ಲಬ್ ನ ಗೌರವದ್ಯಕ್ಷರಾದ ದಿನೇಶ್ ಹಾಲೆಮಜಲು ಊರಿನ ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪ್ಪಾಡಿ. ಪಂಚಾಯತ್ ಸದಸ್ಯೆ ಅನಿತಾ ರಮಾನಂದ ಇವರಿಂದ ದೀಪ ಪ್ರಜ್ವಲನೆಗೊಂಡು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ನಂತರ ಸಮರೋಪ ಕಾರ್ಯಕ್ರಮದಲ್ಲಿ ಕೃಷಿಕ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು.
ವೇದಿಕೆಯಲ್ಲಿ ಕ್ಲಬ್ ನ ಅದ್ಯಕ್ಷರಾದ ಸತೀಶ್ ಬಂಬುಳಿ, ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ಕೋಶಾಧಿಕಾರಿ ಮುರಳಿ ನಳಿಯಾರು, ಪಂಚಾಯತ್ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ದಾನಿಗಳಾದ ದುಗ್ಗಪ್ಪ ಮಾಸ್ತರ್ ಕುಳ್ಳಂಪ್ಪಾಡಿ, ಪುಷ್ಪ ದೇವಿದಾಸ್ ಬುಡ್ಲೆಗುತ್ತು, ಕಾರ್ಯದರ್ಶಿ ದೀಪಕ್ ಕುಂಭಡ್ಕ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹರಿಶ್ಚಂದ್ರ ಕುಳ್ಳಂಪ್ಪಾಡಿ ಸ್ವಾಗತಿಸಿ ಆಕರ್ಷ್ ಕುಳ್ಳಂಪ್ಪಾಡಿ ವಂದಿಸಿದರು. ಪೂರ್ವದ್ಯಕ್ಷರಾದ ಶಿವಪ್ರಸಾದ್ ಹಾಲೆಮಜಲು, ದುರ್ಗದಾಸ್ ಕಡ್ಲಾರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…