ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಿಂದ ಆಂಧ್ರ ಪ್ರದೇಶಕ್ಕೆ ರಾಜ್ಯಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಇಂದು ಸಹಿ ಹಾಕಿದ ಬಳಿಕ ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು.3695 ಆನೆಗಳು ನಮ್ಮಲ್ಲಿವೆ ಎಂದು ಹೇಳಿದ್ದಾರೆ.ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪಲಿದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರ ಪ್ರದೇಶಕ್ಕೆ ಹಸ್ತಾಂತರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಳಗಿಸಿದ ಆನೆಗಳನ್ನು ಕುಮ್ಕಿ ಆನೆಗಳು ಎಂದು ಕರೆಯುತ್ತಾರೆ. ಈ ಕುಮ್ಕಿ ಆನೆಗಳು ಶಿಬಿರದಲ್ಲಿ ಇರುತ್ತವೆ. ರಾಜ್ಯದಲ್ಲಿ 100 ಕ್ಕೂ ಹೆಚ್ಚು ಕುಮ್ಕಿ ಆನೆಗಳು ಇವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel