Advertisement
ನೇಸರ

ಹನುಮಗಿರಿಯ ಪಂಚಮುಖಿ ಆಂಜನೇಯನ ಶಕ್ತಿ ಎಂತಹದ್ದು….!

Share
ಚ್ಚ ಹಸುರಿನಿಂದ ಕೂಡಿದ ಮಲೆನಾಡು ಅನೇಕ  ದೇವಾಲಯಗಳ ತಾಣವೂ ಹೌದು.ಇದಕ್ಕೆ ಹೊಸದಾಗಿ ಸೇರ್ಪಡೆಯಾಗಿದೆ ಪಂಚಮುಖಿ ಆಂಜನೇಯದೇವಸ್ಥಾನ.

ದಕ್ಷಿಣಕನ್ನಡದ ಪುತ್ತೂರಿನಿಂದ ಕಾವು ಮಾರ್ಗವಾಗಿ ಸುಮಾರು 22 ಕಿಲೋಮೀಟರ್ ಸಾಗಿದಾಗ ಸಿಗುತ್ತದೆ ಈಶ್ವರಮಂಗಲ ಎನ್ನುವ ಪುಟ್ಟಊರು. ಇಲ್ಲಿಗೆ ಸಮೀಪದಲ್ಲಿದೆ ಹನುಮಗಿರಿ ಬೆಟ್ಟ.ರಾಮಭಕ್ತ ಇಲ್ಲಿ ಹನುಮಂತ, ವರಾಹ, ನರಸಿಂಹ, ಹಯಗ್ರೀವ ಮತ್ತುಗರುಡ ಹೀಗೆ ಐದು ಮುಖಗಳನ್ನೊಳಗೊಂಡು ಪಂಚಮುಖಿ ಆಂಜನೇಯನಾಗಿ ನೆಲೆಸಿ ಭಕ್ತರನ್ನು ಪೊರೆಯುತ್ತಿದ್ದಾನೆ.

ಸುಮಾರು 11 ಅಡಿ ಎತ್ತರವಿರುವ ಆಂಜನೇಯ ವಿಗ್ರಹವನ್ನು ಕೃಷ್ಣ ಶಿಲೆಯಲ್ಲಿ ಕೆತ್ತಲಾಗಿದ್ದುಇದು ಏಕಶಿಲಾ ವಿಗ್ರಹವಾಗಿದೆ. ರಘುಕುಲ ತಿಲಕ ಶ್ರೀ ರಾಮಚಂದ್ರನ ಹತ್ತು ಅಡಿ ಎತ್ತರದ ವಿಗ್ರಹವೂಇಲ್ಲಿದೆ. ಈ ಕ್ಷೇತ್ರ ಶ್ರೀ ರಾಮಾಂಜನೇಯರ ಐಕ್ಯತೆಯನ್ನು ಸಾರುವತಾಣವೂ ಹೌದು.

ಶನಿದೋಷ ನಿವಾರಣೆಗಾಗಿ ಶನಿಪೂಜೆ, ಕಷ್ಟಪರಿಹಾರಕ್ಕಾಗಿ ರಾಶಿಪೂಜೆ, ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ರಂಗಪೂಜೆ ಹಾಗು ಪವಮಾನ ಪೂಜೆ ಮುಂತಾದ ಸೇವೆಗಳನ್ನು ಶ್ರೀ ದೇವರಿಗೆ ಸಲ್ಲಿಸಲು ಭಕ್ತರಿಗೆ ಅವಕಾಶ ಮಾಡಲಾಗಿದೆ.ಅಲ್ಲದೆ ವಿಶೇಷ ಹಬ್ಬದ ದಿನಗಳಂದು ಜನಮಾನಸದಲ್ಲಿ ಧಾರ್ಮಿಕ ಶ್ರದ್ದಾ ಭಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನೇಕ ರೀತಿಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ವತಿಯಿಂದ ಹಮ್ಮಿಕೊಳ್ಳಲಾಗುತ್ತದೆ. ಭಜನೆ, ಪ್ರವಚನ , ಪಾರಾಯಣಗಳಿಗೂ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.
ಮಾಹಿತಿಯ ಆಗರ ಈ ದೇವಾಲಯ
ಮಹಾದ್ವಾರ ಪ್ರವೇಶಿಸಿದಂತೆ ಎರಡೂ ಬದಿಯಲ್ಲಿದೇವಾಲಯದ ಒಳ ಹೋಗಲು ಮಟ್ಟಿಲುಗಳಿವೆ. ಇದಕ್ಕೆ ಹೊಂದಿಕೊಂಡಂತಿರುವ ಗೋಡೆಗಳಲ್ಲಿ ಆಂಜನೇಯನ ಬಾಲ್ಯ, ರಾಮಾಯಣದಲ್ಲಿ ಬರುವ ಕತೆಗಳನ್ನು ಸಚಿತ್ರವಾಗಿ ವಿವರಿಸುವ ಕೆತ್ತನೆಗಳನ್ನು ಮಾಡಲಾಗಿದೆ.ಹೊರಾಂಗಣದಲ್ಲಿ ಮಾತ್ರವಲ್ಲ, ದೇವಾಲಯದ ಒಳಗೆ ಪ್ರವೇಶಿಸಿದ ನಂತರವೂ ಆಂಜನೇಯ ಹನುಮಗಿರಿಯಲ್ಲಿ ಬಂದು ನೆಲೆ ನಿಲ್ಲಲುಕಾರಣವಾದ ಪೌರಾಣಿಕ ಹಿನ್ನಲೆಗಳನ್ನೊಳಗೊಂಡಿರುವ ಕಥೆಗಳನ್ನು ಕಾಣಬಹುದು.ಇನ್ನುದೇವಸ್ಥಾನದ ಹೊರಗಡೆ ಇರುವ ರಾಮಾಯಣ ಮಾನಸೋದ್ಯಾನದಲ್ಲಿ ಶ್ರೀ ರಾಮಚಂದ್ರನ ಜನನದಿಂದ ಬಾಲ್ಯ,ಯೌವನ, ಸೀತಾ ಸ್ವಯಂವರ, ಶ್ರೀರಾಮ ಪಟ್ಟಾಭಿಷೇಕ ಸಿದ್ದತೆ, ಶ್ರೀರಾಮ ವನಾಭಿಗಮನ, ಸೀತಾಪಹರಣ, ರಾವಣನ ಸಂಹಾರ , ಶ್ರೀರಾಮ ಪಟ್ಟಾಭಿಷೇಕ ಹೀಗೆ ರಾಮಾಯಣದಲ್ಲಿ ಬರುವ ಪ್ರಮುಖ ಘಟನೆಗಳನ್ನು ವಿವರಿಸುವಂತಹ ಶಿಲ್ಪಕಲೆಯನ್ನು ಕಾಣಬಹುದು. ಮಕ್ಕಳಿಗೆ ಸುಲಭವಾಗಿಅರ್ಥವಾಗುವಂತೆರಾಮಾಯಣದ ಕತೆಗಳನ್ನು ಹೇಳಬಹುದಾದ ಈ ಜಾಗ ಒಳ್ಳೆಯ ಪಿಕ್‍ನಿಕ್‍ತಾಣವೂ ಹೌದು

 

ಓಡಾಡಲು ವಿಶಾಲವಾದ ಅಂಗಣ, ಮಕ್ಕಳಿಗಾಗಿ ಮಾಡಲಾದ ಪಾರ್ಕ್, ಒಂದುಕಡೆ ನಿಂತು ನೋಡಿದರೆ ಕಾಣಸಿಗುವ ಬೆಟ್ಟಗುಡ್ಡಗಳ ಸಾಲುಗಳು, ಸಂಜೆಯ ಹೊತ್ತಿಗೆ ಬೀಸುವ ತಂಪಾದ ಗಾಳಿ ಕಣ್ಮನಕ್ಕೆ ಮುದಕೊಡುವಂತಿದೆ. ಮದ್ಯಾಹ್ನ ದೇವಸ್ಥಾನದ ವತಿಯಿಂದ ಊಟದ ವ್ಯವಸ್ಥೆಯೂಇದೆ.ಗೋವುಗಳ ಸಂರಕ್ಷಣೆಗೆ ಗೋ ಶಾಲೆಯೂ ಇಲ್ಲಿದೆ.ಇಲ್ಲಿ ಬಂದು ಭಕ್ತಿಯಿಂದ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಿದರೆ ಆರೋಗ್ಯದ ಸಮಸ್ಯೆಗಳು ಪರಿಹಾರವಾಗುತ್ತದೆ ಅಲ್ಲದೇ ಬೇಡಿದ್ದನ್ನುಆಂಜನೇಯ ಈಡೇರಿಸುತ್ತಾನೆ ಎನ್ನುವ ಮಾತುಗಳಿವೆ.

# ವಂದನಾರವಿ ಕೆ.ವೈ.ವೇಣೂರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

6 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

7 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

12 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago