Advertisement
ನೇಸರ

ಹನುಮಗಿರಿಯ ಪಂಚಮುಖಿ ಆಂಜನೇಯನ ಶಕ್ತಿ ಎಂತಹದ್ದು….!

Share
ಚ್ಚ ಹಸುರಿನಿಂದ ಕೂಡಿದ ಮಲೆನಾಡು ಅನೇಕ  ದೇವಾಲಯಗಳ ತಾಣವೂ ಹೌದು.ಇದಕ್ಕೆ ಹೊಸದಾಗಿ ಸೇರ್ಪಡೆಯಾಗಿದೆ ಪಂಚಮುಖಿ ಆಂಜನೇಯದೇವಸ್ಥಾನ.

ದಕ್ಷಿಣಕನ್ನಡದ ಪುತ್ತೂರಿನಿಂದ ಕಾವು ಮಾರ್ಗವಾಗಿ ಸುಮಾರು 22 ಕಿಲೋಮೀಟರ್ ಸಾಗಿದಾಗ ಸಿಗುತ್ತದೆ ಈಶ್ವರಮಂಗಲ ಎನ್ನುವ ಪುಟ್ಟಊರು. ಇಲ್ಲಿಗೆ ಸಮೀಪದಲ್ಲಿದೆ ಹನುಮಗಿರಿ ಬೆಟ್ಟ.ರಾಮಭಕ್ತ ಇಲ್ಲಿ ಹನುಮಂತ, ವರಾಹ, ನರಸಿಂಹ, ಹಯಗ್ರೀವ ಮತ್ತುಗರುಡ ಹೀಗೆ ಐದು ಮುಖಗಳನ್ನೊಳಗೊಂಡು ಪಂಚಮುಖಿ ಆಂಜನೇಯನಾಗಿ ನೆಲೆಸಿ ಭಕ್ತರನ್ನು ಪೊರೆಯುತ್ತಿದ್ದಾನೆ.

ಸುಮಾರು 11 ಅಡಿ ಎತ್ತರವಿರುವ ಆಂಜನೇಯ ವಿಗ್ರಹವನ್ನು ಕೃಷ್ಣ ಶಿಲೆಯಲ್ಲಿ ಕೆತ್ತಲಾಗಿದ್ದುಇದು ಏಕಶಿಲಾ ವಿಗ್ರಹವಾಗಿದೆ. ರಘುಕುಲ ತಿಲಕ ಶ್ರೀ ರಾಮಚಂದ್ರನ ಹತ್ತು ಅಡಿ ಎತ್ತರದ ವಿಗ್ರಹವೂಇಲ್ಲಿದೆ. ಈ ಕ್ಷೇತ್ರ ಶ್ರೀ ರಾಮಾಂಜನೇಯರ ಐಕ್ಯತೆಯನ್ನು ಸಾರುವತಾಣವೂ ಹೌದು.

ಶನಿದೋಷ ನಿವಾರಣೆಗಾಗಿ ಶನಿಪೂಜೆ, ಕಷ್ಟಪರಿಹಾರಕ್ಕಾಗಿ ರಾಶಿಪೂಜೆ, ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ರಂಗಪೂಜೆ ಹಾಗು ಪವಮಾನ ಪೂಜೆ ಮುಂತಾದ ಸೇವೆಗಳನ್ನು ಶ್ರೀ ದೇವರಿಗೆ ಸಲ್ಲಿಸಲು ಭಕ್ತರಿಗೆ ಅವಕಾಶ ಮಾಡಲಾಗಿದೆ.ಅಲ್ಲದೆ ವಿಶೇಷ ಹಬ್ಬದ ದಿನಗಳಂದು ಜನಮಾನಸದಲ್ಲಿ ಧಾರ್ಮಿಕ ಶ್ರದ್ದಾ ಭಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನೇಕ ರೀತಿಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ವತಿಯಿಂದ ಹಮ್ಮಿಕೊಳ್ಳಲಾಗುತ್ತದೆ. ಭಜನೆ, ಪ್ರವಚನ , ಪಾರಾಯಣಗಳಿಗೂ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.
ಮಾಹಿತಿಯ ಆಗರ ಈ ದೇವಾಲಯ
ಮಹಾದ್ವಾರ ಪ್ರವೇಶಿಸಿದಂತೆ ಎರಡೂ ಬದಿಯಲ್ಲಿದೇವಾಲಯದ ಒಳ ಹೋಗಲು ಮಟ್ಟಿಲುಗಳಿವೆ. ಇದಕ್ಕೆ ಹೊಂದಿಕೊಂಡಂತಿರುವ ಗೋಡೆಗಳಲ್ಲಿ ಆಂಜನೇಯನ ಬಾಲ್ಯ, ರಾಮಾಯಣದಲ್ಲಿ ಬರುವ ಕತೆಗಳನ್ನು ಸಚಿತ್ರವಾಗಿ ವಿವರಿಸುವ ಕೆತ್ತನೆಗಳನ್ನು ಮಾಡಲಾಗಿದೆ.ಹೊರಾಂಗಣದಲ್ಲಿ ಮಾತ್ರವಲ್ಲ, ದೇವಾಲಯದ ಒಳಗೆ ಪ್ರವೇಶಿಸಿದ ನಂತರವೂ ಆಂಜನೇಯ ಹನುಮಗಿರಿಯಲ್ಲಿ ಬಂದು ನೆಲೆ ನಿಲ್ಲಲುಕಾರಣವಾದ ಪೌರಾಣಿಕ ಹಿನ್ನಲೆಗಳನ್ನೊಳಗೊಂಡಿರುವ ಕಥೆಗಳನ್ನು ಕಾಣಬಹುದು.ಇನ್ನುದೇವಸ್ಥಾನದ ಹೊರಗಡೆ ಇರುವ ರಾಮಾಯಣ ಮಾನಸೋದ್ಯಾನದಲ್ಲಿ ಶ್ರೀ ರಾಮಚಂದ್ರನ ಜನನದಿಂದ ಬಾಲ್ಯ,ಯೌವನ, ಸೀತಾ ಸ್ವಯಂವರ, ಶ್ರೀರಾಮ ಪಟ್ಟಾಭಿಷೇಕ ಸಿದ್ದತೆ, ಶ್ರೀರಾಮ ವನಾಭಿಗಮನ, ಸೀತಾಪಹರಣ, ರಾವಣನ ಸಂಹಾರ , ಶ್ರೀರಾಮ ಪಟ್ಟಾಭಿಷೇಕ ಹೀಗೆ ರಾಮಾಯಣದಲ್ಲಿ ಬರುವ ಪ್ರಮುಖ ಘಟನೆಗಳನ್ನು ವಿವರಿಸುವಂತಹ ಶಿಲ್ಪಕಲೆಯನ್ನು ಕಾಣಬಹುದು. ಮಕ್ಕಳಿಗೆ ಸುಲಭವಾಗಿಅರ್ಥವಾಗುವಂತೆರಾಮಾಯಣದ ಕತೆಗಳನ್ನು ಹೇಳಬಹುದಾದ ಈ ಜಾಗ ಒಳ್ಳೆಯ ಪಿಕ್‍ನಿಕ್‍ತಾಣವೂ ಹೌದು

 

ಓಡಾಡಲು ವಿಶಾಲವಾದ ಅಂಗಣ, ಮಕ್ಕಳಿಗಾಗಿ ಮಾಡಲಾದ ಪಾರ್ಕ್, ಒಂದುಕಡೆ ನಿಂತು ನೋಡಿದರೆ ಕಾಣಸಿಗುವ ಬೆಟ್ಟಗುಡ್ಡಗಳ ಸಾಲುಗಳು, ಸಂಜೆಯ ಹೊತ್ತಿಗೆ ಬೀಸುವ ತಂಪಾದ ಗಾಳಿ ಕಣ್ಮನಕ್ಕೆ ಮುದಕೊಡುವಂತಿದೆ. ಮದ್ಯಾಹ್ನ ದೇವಸ್ಥಾನದ ವತಿಯಿಂದ ಊಟದ ವ್ಯವಸ್ಥೆಯೂಇದೆ.ಗೋವುಗಳ ಸಂರಕ್ಷಣೆಗೆ ಗೋ ಶಾಲೆಯೂ ಇಲ್ಲಿದೆ.ಇಲ್ಲಿ ಬಂದು ಭಕ್ತಿಯಿಂದ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಿದರೆ ಆರೋಗ್ಯದ ಸಮಸ್ಯೆಗಳು ಪರಿಹಾರವಾಗುತ್ತದೆ ಅಲ್ಲದೇ ಬೇಡಿದ್ದನ್ನುಆಂಜನೇಯ ಈಡೇರಿಸುತ್ತಾನೆ ಎನ್ನುವ ಮಾತುಗಳಿವೆ.

# ವಂದನಾರವಿ ಕೆ.ವೈ.ವೇಣೂರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago