Advertisement
MIRROR FOCUS

ಪುತ್ತೂರು: ದೀಪಾವಳಿ ಶುಭ ದೀಪಾವಳಿ ಅಭಿಯಾನ

Share

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ದೀಪಗಳ ಹಬ್ಬವಾದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿನಾಗಿ ಆಚರಿಸಲು ನವೆಂಬರ್ 6 ರಿಂದ ನವೆಂಬರ್ 14ರವರೆಗೆ ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಅಭಿಯಾನ ನಡೆಯಲಿದೆ.

ಪಟಾಕಿಗಳು ಸ್ಪೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ, ವಾಯುಮಾಲಿನ್ಯ ಮತ್ತು ತ್ಯಾಜ್ಯ ಉತ್ಪಾದನೆಯಿಂದ ಉಂಟಾಗುವ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಹಿತ ದೃಷ್ಟಿಯಿಂದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಿ ಮತ್ತು ಏಕ ಬಳಿಕೆ ಪ್ಲಾಸ್ಟಿಕ್ ಬದಲಾಗಿ ಪರ್ಯಾಯವಾದ ವಸ್ತುಗಳನ್ನು ಅಥವಾ ಪರಿಸರಸ್ನೇಹಿ ವಸ್ತುಗಳನ್ನು ಬಳಸುವ ಮತ್ತು ತ್ಯಾಜ್ಯದಿಂದ ಉಪಯುಕ್ತ ವಸ್ತುಗಳನ್ನು ಸಿದ್ಧಪಡಿಸಿ ದೀಪಾವಳಿ ಉಡುಗೊರೆಯನ್ನು ನೀಡಿ ಪರಿಸರಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಸ್ವಚ್ಛ ದೀಪಾವಳಿ ಸಹಿ ಅಭಿಯಾನ ವನ್ನು Mygov ಪೋರ್ಟಲ್ ನಲ್ಲಿ Upload  ಮಾಡುವ ಮೂಲಕ ನಾಗರಿಕರು ನಗರ ಸಭೆಯೊಂದಿಗೆ ಸಹಕರಿಸುವುದು ಮತ್ತು ಸದರಿ ಸಹಿ,ಸಿಗ್ನೇಚರ್ ಅಭಿಯಾನಕ್ಕೆ ಸೇರುವ ಮೂಲಕ ಅವರ ಬದ್ಧತೆಯನ್ನು ಪ್ರದರ್ಶಿಸಬೇಕು.ಸ್ವಚ್ಛ ದೀಪಾವಳಿ ವಿಡಿಯೋ ರೀಲ್ಸ್ 30 ರಿಂದ 60 ಸೆಕೆಂಡುಗಳ ಸಣ್ಣ ವಿಡಿಯೋಗಳನ್ನು ಸಂಯೋಜಿಸಿ,ರಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ನಾಗರಿಕರು ತಮ್ಮ ಮನೆಗಳ ಹಂತದಲ್ಲಿ ಆಚರಿಸುವ ಸ್ವಚ್ಛ ದೀಪಾವಳಿ ಆಚರಣೆಗಳ ವಿಶಿಷ್ಟ ವಿಧಾನಗಳನ್ನು ಪ್ರದರ್ಶಿಸಿ ನಗರಸಭೆಗೆ ತಿಳಿಸಲು ಕೋರಿದೆ.

ಈ ಅಭಿಯಾನದಲ್ಲಿ ಎಲ್ಲಾ ನಗರದ ನಾಗರಿಕರು ಭಾಗವಹಿಸಿ ಪರಿಸರಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ ಯಶಸ್ವಿಗೊಳಿಸಲು ಸಾರ್ವಜನಿಕರಲ್ಲಿ ಕೋರಲಾಗಿದೆ ಎಂದು ಪುತ್ತೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

8 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

10 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

22 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

22 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago