Advertisement
MIRROR FOCUS

ಪುತ್ತೂರು: ದೀಪಾವಳಿ ಶುಭ ದೀಪಾವಳಿ ಅಭಿಯಾನ

Share

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ದೀಪಗಳ ಹಬ್ಬವಾದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿನಾಗಿ ಆಚರಿಸಲು ನವೆಂಬರ್ 6 ರಿಂದ ನವೆಂಬರ್ 14ರವರೆಗೆ ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಅಭಿಯಾನ ನಡೆಯಲಿದೆ.

ಪಟಾಕಿಗಳು ಸ್ಪೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ, ವಾಯುಮಾಲಿನ್ಯ ಮತ್ತು ತ್ಯಾಜ್ಯ ಉತ್ಪಾದನೆಯಿಂದ ಉಂಟಾಗುವ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಹಿತ ದೃಷ್ಟಿಯಿಂದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಿ ಮತ್ತು ಏಕ ಬಳಿಕೆ ಪ್ಲಾಸ್ಟಿಕ್ ಬದಲಾಗಿ ಪರ್ಯಾಯವಾದ ವಸ್ತುಗಳನ್ನು ಅಥವಾ ಪರಿಸರಸ್ನೇಹಿ ವಸ್ತುಗಳನ್ನು ಬಳಸುವ ಮತ್ತು ತ್ಯಾಜ್ಯದಿಂದ ಉಪಯುಕ್ತ ವಸ್ತುಗಳನ್ನು ಸಿದ್ಧಪಡಿಸಿ ದೀಪಾವಳಿ ಉಡುಗೊರೆಯನ್ನು ನೀಡಿ ಪರಿಸರಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಸ್ವಚ್ಛ ದೀಪಾವಳಿ ಸಹಿ ಅಭಿಯಾನ ವನ್ನು Mygov ಪೋರ್ಟಲ್ ನಲ್ಲಿ Upload  ಮಾಡುವ ಮೂಲಕ ನಾಗರಿಕರು ನಗರ ಸಭೆಯೊಂದಿಗೆ ಸಹಕರಿಸುವುದು ಮತ್ತು ಸದರಿ ಸಹಿ,ಸಿಗ್ನೇಚರ್ ಅಭಿಯಾನಕ್ಕೆ ಸೇರುವ ಮೂಲಕ ಅವರ ಬದ್ಧತೆಯನ್ನು ಪ್ರದರ್ಶಿಸಬೇಕು.ಸ್ವಚ್ಛ ದೀಪಾವಳಿ ವಿಡಿಯೋ ರೀಲ್ಸ್ 30 ರಿಂದ 60 ಸೆಕೆಂಡುಗಳ ಸಣ್ಣ ವಿಡಿಯೋಗಳನ್ನು ಸಂಯೋಜಿಸಿ,ರಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ನಾಗರಿಕರು ತಮ್ಮ ಮನೆಗಳ ಹಂತದಲ್ಲಿ ಆಚರಿಸುವ ಸ್ವಚ್ಛ ದೀಪಾವಳಿ ಆಚರಣೆಗಳ ವಿಶಿಷ್ಟ ವಿಧಾನಗಳನ್ನು ಪ್ರದರ್ಶಿಸಿ ನಗರಸಭೆಗೆ ತಿಳಿಸಲು ಕೋರಿದೆ.

ಈ ಅಭಿಯಾನದಲ್ಲಿ ಎಲ್ಲಾ ನಗರದ ನಾಗರಿಕರು ಭಾಗವಹಿಸಿ ಪರಿಸರಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ ಯಶಸ್ವಿಗೊಳಿಸಲು ಸಾರ್ವಜನಿಕರಲ್ಲಿ ಕೋರಲಾಗಿದೆ ಎಂದು ಪುತ್ತೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

3 minutes ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

10 minutes ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

10 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

11 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

16 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

24 hours ago