Advertisement
MIRROR FOCUS

ಪುತ್ತೂರು: ದೀಪಾವಳಿ ಶುಭ ದೀಪಾವಳಿ ಅಭಿಯಾನ

Share

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ದೀಪಗಳ ಹಬ್ಬವಾದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿನಾಗಿ ಆಚರಿಸಲು ನವೆಂಬರ್ 6 ರಿಂದ ನವೆಂಬರ್ 14ರವರೆಗೆ ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಅಭಿಯಾನ ನಡೆಯಲಿದೆ.

ಪಟಾಕಿಗಳು ಸ್ಪೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ, ವಾಯುಮಾಲಿನ್ಯ ಮತ್ತು ತ್ಯಾಜ್ಯ ಉತ್ಪಾದನೆಯಿಂದ ಉಂಟಾಗುವ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಹಿತ ದೃಷ್ಟಿಯಿಂದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಿ ಮತ್ತು ಏಕ ಬಳಿಕೆ ಪ್ಲಾಸ್ಟಿಕ್ ಬದಲಾಗಿ ಪರ್ಯಾಯವಾದ ವಸ್ತುಗಳನ್ನು ಅಥವಾ ಪರಿಸರಸ್ನೇಹಿ ವಸ್ತುಗಳನ್ನು ಬಳಸುವ ಮತ್ತು ತ್ಯಾಜ್ಯದಿಂದ ಉಪಯುಕ್ತ ವಸ್ತುಗಳನ್ನು ಸಿದ್ಧಪಡಿಸಿ ದೀಪಾವಳಿ ಉಡುಗೊರೆಯನ್ನು ನೀಡಿ ಪರಿಸರಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಸ್ವಚ್ಛ ದೀಪಾವಳಿ ಸಹಿ ಅಭಿಯಾನ ವನ್ನು Mygov ಪೋರ್ಟಲ್ ನಲ್ಲಿ Upload  ಮಾಡುವ ಮೂಲಕ ನಾಗರಿಕರು ನಗರ ಸಭೆಯೊಂದಿಗೆ ಸಹಕರಿಸುವುದು ಮತ್ತು ಸದರಿ ಸಹಿ,ಸಿಗ್ನೇಚರ್ ಅಭಿಯಾನಕ್ಕೆ ಸೇರುವ ಮೂಲಕ ಅವರ ಬದ್ಧತೆಯನ್ನು ಪ್ರದರ್ಶಿಸಬೇಕು.ಸ್ವಚ್ಛ ದೀಪಾವಳಿ ವಿಡಿಯೋ ರೀಲ್ಸ್ 30 ರಿಂದ 60 ಸೆಕೆಂಡುಗಳ ಸಣ್ಣ ವಿಡಿಯೋಗಳನ್ನು ಸಂಯೋಜಿಸಿ,ರಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ನಾಗರಿಕರು ತಮ್ಮ ಮನೆಗಳ ಹಂತದಲ್ಲಿ ಆಚರಿಸುವ ಸ್ವಚ್ಛ ದೀಪಾವಳಿ ಆಚರಣೆಗಳ ವಿಶಿಷ್ಟ ವಿಧಾನಗಳನ್ನು ಪ್ರದರ್ಶಿಸಿ ನಗರಸಭೆಗೆ ತಿಳಿಸಲು ಕೋರಿದೆ.

ಈ ಅಭಿಯಾನದಲ್ಲಿ ಎಲ್ಲಾ ನಗರದ ನಾಗರಿಕರು ಭಾಗವಹಿಸಿ ಪರಿಸರಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ ಯಶಸ್ವಿಗೊಳಿಸಲು ಸಾರ್ವಜನಿಕರಲ್ಲಿ ಕೋರಲಾಗಿದೆ ಎಂದು ಪುತ್ತೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

57 minutes ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

2 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

11 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

12 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

12 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

17 hours ago