Advertisement
Opinion

ಹೊಸ ವರ್ಷದ ಶುಭಾಶಯಗಳು | ಅಸೂಯೆ, ಸ್ವಾರ್ಥವನ್ನು ತೊರೆದು ಬದುಕೋಣ…

Share

ಹೊಸ ವರ್ಷದ ಶುಭಾಶಯಗಳು(Happy New Year), 2023 ವರ್ಷ ಮುಗಿದೇ ಹೋಯಿತು…. 2024ರ ವರ್ಷ ಇಂದಿನ ದಿನದಿಂದ ಪ್ರಾರಂಭವಾಯಿತು. ಹೊಸ ಸಾಹಸದಿಂದ ಹಿಡಿದ ಕೆಲಸ ಮುಂದುವರೆಸು.‌‌‌ ಒಂದು ದಿನ‌‌‌‌‌‌‌‌‌‌‌ ಅಥವಾ ಅಲ್ಪ ಸಮಯದಲ್ಲೇ ಜಯಗಳಿಸುವೆನೆಂದು ಯಾವಾಗಲೂ ನಿರೀಕ್ಷೆಯನ್ನು ಇಟ್ಟುಕೊಳ್ಳಬೇಡ ನಾನು ಯಾವಾಗಲೂ ಅತ್ಯುನ್ನತವಾದ ಆದರ್ಶವನ್ನೇ ಆಶ್ರಯಿಸುತ್ತೇನೆ ಹಾಗೂ ಸ್ಥಿರವಾಗಿರುತ್ತೇನೆಂದು ನಿಶ್ಚಯ ಮಾಡಿಕೋ, ಅಸೂಯೆ, ಸ್ವಾರ್ಥವನ್ನು ತೊರೆದು, ನನ್ನ ದೇಶಕ್ಕೆ ಮತ್ತು ಮಾನವತೆಗೆ ನಿರಂತರವಾಗಿ ವಿಧೇಯನಾಗಿರುತ್ತೇನೆಂದು ಮತ್ತು ಸತ್ಯ ನಿಷ್ಠೆಗೆ ಬದ್ಧನಾಗಿರುತ್ತೇನೆಂದು ನಿಶ್ಚಯಿಸು ಆಗ ಜಗತ್ತನ್ನೇ ಅಲ್ಲಾಡಿಸುವ ಶಕ್ತಿಯನ್ನು ಆ ಭಗವಂತನೇ ನಿನಗೆ ಕರುಣಿಸುತ್ತಾನೆ.

ನಿನ್ನ ಮನಸ್ಸಿನಲ್ಲಿ ಅಹಂಕಾರವೇನಾದರೂ ಬಂದರೆ ನಿನ್ನ ಹತ್ತಿರದಲ್ಲಿ ಇರುವ ಸ್ಮಶಾನಕ್ಕೆ ಒಮ್ಮೆಭೇಟಿ ಕೊಡು ಅಲ್ಲಿ ನಿನಗಿಂತ ಶ್ರೀಮಂತ, ಶಕ್ತಿವಂತ, ಸೌಂದರ್ಯವಂತ, ಹಾಗೂ ನಿನಗಿಂತ ಬಲಾಡ್ಯ ದೇಹವನ್ನು ಹೊ०ದಿದಂತಹ ವ್ಯಕ್ತಿ ,6×3,ಅಡಿ, ಮಣ್ಣಲ್ಲಿ ಮಣ್ಣಾಗಿ ಹೋಗಿದ್ದರೆ ಅಥವಾ ಕಟ್ಟಿಗೆಯ ನಡುವೆ ಬೂದಿಯಾಗುತ್ತಿದ್ದರೆ, ಒಂದಲ್ಲ ಒಂದು ದಿನ ನಿನಗೂ ಅದೇ ಸ್ಥಳಕ್ಕೆ ಹೋಗಲಿಕ್ಕೆ ಇದೆ. ಇದನ್ನು ಅರ್ಥಮಾಡಿಕೊಂಡವನ ಮನಸ್ಸಿನಲ್ಲಿ ಒಂದು ಅಣುವಿನಷ್ಟು ಅಹಂಕಾರ ಬರಲಾರದು.

ಚಿಂತಿಸುವವನಿಗೆ ದೃಷ್ಟಾಂತವಿದೆ. ನಮಗೆ ಸಿಹಿಯ ರುಚಿ ಅರಿವಾಗಬೇಕೆಂದರೆ ಮೊದಲು ಕಹಿಯ ಅನುಭವ ಇರಬೇಕು, ಕಷ್ಟದ ಬೆಲೆ ತಿಳಿದಿದ್ದರೆ ಸುಖದ ಅನುಭವ ಪ್ರತಿಫಲ ಏನು ಎಂದು ತಿಳಿಯುತ್ತದೆ.  ಅರ್ಥ ಮಾಡಿಕೊಂಡರೆ ಜೀವನ ತುಂಬ ಸುಂದರ, ಸಹಾಯ ಪಡೆದವರನ್ನು ಎಂದಿಗೂ ಮರೆಯಬಾರದು,
ಸಹಾಯ ಮಾಡಿದರೆ ಅದನ್ನು ಪದೇ ಪದೇ ನೆನಪಿಸಬಾರದು. ನಮ್ಮ ಶಕ್ತಿ ಹೆಚ್ಚಾಗುವುದು ನಮ್ಮ ಗೆಲುವುಗಳಿಂದಲ್ಲ. ಗೆಲುವಿಗಾಗಿ ನಾವುನಡೆಸುವ ಹೋರಾಟಗಳಿಂದ. ಆದುದರಿಂದ ಎಂತಹ ಪರಿಸ್ಥಿಯಲ್ಲೂ ಶರಣಾಗತರಾಗದಿರುವುದೇ ನಿಜವಾದ ಶಕ್ತಿ. ಆ ಅನುಭವ ನಮನ್ನು ಯಶಸ್ಸಿನಿಂದ ಜಗತ್ತಿಗೆ ಪರಿಚಯಿಸುತ್ತದೆ.

ಹಿಂದಿನ ವಷ೯ದ ಕೊನೆಯ ದಿನ ಮುಗಿದು ಹೊಸ ವರ್ಷ ಬಂದೇ ಬಿಟ್ಟಿತು, ನಮ್ಮ ಕಣ್ಣ್ ಗಳಲ್ಲಿ ನೀರು ತಂದವರಿಗೆ ಹಾಗೂ ಮುಖದಲ್ಲಿ ನಗು ತಂದವರಿಗೆ, ಇಬ್ಬರಿಗೂ ಧನ್ಯವಾದಗಳು ಹೇಳುವ ಮನಸ್ಸು ನಮ್ಮದಾಗಬೇಕು. 2024ರ ಹೊಸ ವರ್ಷ ದೊಡ್ಡ ಯಶಸ್ಸಿನ ವರ್ಷ ನಿಮ್ಮದಾಗಲಿ ನಿಮ್ಮ ಕನಸುಗಳು ನನಸಾಗಲಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

6 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

6 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

11 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

11 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

11 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

11 hours ago