Advertisement
Opinion

ಹೊಸ ವರ್ಷದ ಶುಭಾಶಯಗಳು | ಅಸೂಯೆ, ಸ್ವಾರ್ಥವನ್ನು ತೊರೆದು ಬದುಕೋಣ…

Share

ಹೊಸ ವರ್ಷದ ಶುಭಾಶಯಗಳು(Happy New Year), 2023 ವರ್ಷ ಮುಗಿದೇ ಹೋಯಿತು…. 2024ರ ವರ್ಷ ಇಂದಿನ ದಿನದಿಂದ ಪ್ರಾರಂಭವಾಯಿತು. ಹೊಸ ಸಾಹಸದಿಂದ ಹಿಡಿದ ಕೆಲಸ ಮುಂದುವರೆಸು.‌‌‌ ಒಂದು ದಿನ‌‌‌‌‌‌‌‌‌‌‌ ಅಥವಾ ಅಲ್ಪ ಸಮಯದಲ್ಲೇ ಜಯಗಳಿಸುವೆನೆಂದು ಯಾವಾಗಲೂ ನಿರೀಕ್ಷೆಯನ್ನು ಇಟ್ಟುಕೊಳ್ಳಬೇಡ ನಾನು ಯಾವಾಗಲೂ ಅತ್ಯುನ್ನತವಾದ ಆದರ್ಶವನ್ನೇ ಆಶ್ರಯಿಸುತ್ತೇನೆ ಹಾಗೂ ಸ್ಥಿರವಾಗಿರುತ್ತೇನೆಂದು ನಿಶ್ಚಯ ಮಾಡಿಕೋ, ಅಸೂಯೆ, ಸ್ವಾರ್ಥವನ್ನು ತೊರೆದು, ನನ್ನ ದೇಶಕ್ಕೆ ಮತ್ತು ಮಾನವತೆಗೆ ನಿರಂತರವಾಗಿ ವಿಧೇಯನಾಗಿರುತ್ತೇನೆಂದು ಮತ್ತು ಸತ್ಯ ನಿಷ್ಠೆಗೆ ಬದ್ಧನಾಗಿರುತ್ತೇನೆಂದು ನಿಶ್ಚಯಿಸು ಆಗ ಜಗತ್ತನ್ನೇ ಅಲ್ಲಾಡಿಸುವ ಶಕ್ತಿಯನ್ನು ಆ ಭಗವಂತನೇ ನಿನಗೆ ಕರುಣಿಸುತ್ತಾನೆ.

ನಿನ್ನ ಮನಸ್ಸಿನಲ್ಲಿ ಅಹಂಕಾರವೇನಾದರೂ ಬಂದರೆ ನಿನ್ನ ಹತ್ತಿರದಲ್ಲಿ ಇರುವ ಸ್ಮಶಾನಕ್ಕೆ ಒಮ್ಮೆಭೇಟಿ ಕೊಡು ಅಲ್ಲಿ ನಿನಗಿಂತ ಶ್ರೀಮಂತ, ಶಕ್ತಿವಂತ, ಸೌಂದರ್ಯವಂತ, ಹಾಗೂ ನಿನಗಿಂತ ಬಲಾಡ್ಯ ದೇಹವನ್ನು ಹೊ०ದಿದಂತಹ ವ್ಯಕ್ತಿ ,6×3,ಅಡಿ, ಮಣ್ಣಲ್ಲಿ ಮಣ್ಣಾಗಿ ಹೋಗಿದ್ದರೆ ಅಥವಾ ಕಟ್ಟಿಗೆಯ ನಡುವೆ ಬೂದಿಯಾಗುತ್ತಿದ್ದರೆ, ಒಂದಲ್ಲ ಒಂದು ದಿನ ನಿನಗೂ ಅದೇ ಸ್ಥಳಕ್ಕೆ ಹೋಗಲಿಕ್ಕೆ ಇದೆ. ಇದನ್ನು ಅರ್ಥಮಾಡಿಕೊಂಡವನ ಮನಸ್ಸಿನಲ್ಲಿ ಒಂದು ಅಣುವಿನಷ್ಟು ಅಹಂಕಾರ ಬರಲಾರದು.

ಚಿಂತಿಸುವವನಿಗೆ ದೃಷ್ಟಾಂತವಿದೆ. ನಮಗೆ ಸಿಹಿಯ ರುಚಿ ಅರಿವಾಗಬೇಕೆಂದರೆ ಮೊದಲು ಕಹಿಯ ಅನುಭವ ಇರಬೇಕು, ಕಷ್ಟದ ಬೆಲೆ ತಿಳಿದಿದ್ದರೆ ಸುಖದ ಅನುಭವ ಪ್ರತಿಫಲ ಏನು ಎಂದು ತಿಳಿಯುತ್ತದೆ.  ಅರ್ಥ ಮಾಡಿಕೊಂಡರೆ ಜೀವನ ತುಂಬ ಸುಂದರ, ಸಹಾಯ ಪಡೆದವರನ್ನು ಎಂದಿಗೂ ಮರೆಯಬಾರದು,
ಸಹಾಯ ಮಾಡಿದರೆ ಅದನ್ನು ಪದೇ ಪದೇ ನೆನಪಿಸಬಾರದು. ನಮ್ಮ ಶಕ್ತಿ ಹೆಚ್ಚಾಗುವುದು ನಮ್ಮ ಗೆಲುವುಗಳಿಂದಲ್ಲ. ಗೆಲುವಿಗಾಗಿ ನಾವುನಡೆಸುವ ಹೋರಾಟಗಳಿಂದ. ಆದುದರಿಂದ ಎಂತಹ ಪರಿಸ್ಥಿಯಲ್ಲೂ ಶರಣಾಗತರಾಗದಿರುವುದೇ ನಿಜವಾದ ಶಕ್ತಿ. ಆ ಅನುಭವ ನಮನ್ನು ಯಶಸ್ಸಿನಿಂದ ಜಗತ್ತಿಗೆ ಪರಿಚಯಿಸುತ್ತದೆ.

ಹಿಂದಿನ ವಷ೯ದ ಕೊನೆಯ ದಿನ ಮುಗಿದು ಹೊಸ ವರ್ಷ ಬಂದೇ ಬಿಟ್ಟಿತು, ನಮ್ಮ ಕಣ್ಣ್ ಗಳಲ್ಲಿ ನೀರು ತಂದವರಿಗೆ ಹಾಗೂ ಮುಖದಲ್ಲಿ ನಗು ತಂದವರಿಗೆ, ಇಬ್ಬರಿಗೂ ಧನ್ಯವಾದಗಳು ಹೇಳುವ ಮನಸ್ಸು ನಮ್ಮದಾಗಬೇಕು. 2024ರ ಹೊಸ ವರ್ಷ ದೊಡ್ಡ ಯಶಸ್ಸಿನ ವರ್ಷ ನಿಮ್ಮದಾಗಲಿ ನಿಮ್ಮ ಕನಸುಗಳು ನನಸಾಗಲಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

4 hours ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

9 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

9 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

12 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

12 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

13 hours ago