Advertisement
Opinion

ಹೊಸ ವರ್ಷದ ಶುಭಾಶಯಗಳು | ಅಸೂಯೆ, ಸ್ವಾರ್ಥವನ್ನು ತೊರೆದು ಬದುಕೋಣ…

Share

ಹೊಸ ವರ್ಷದ ಶುಭಾಶಯಗಳು(Happy New Year), 2023 ವರ್ಷ ಮುಗಿದೇ ಹೋಯಿತು…. 2024ರ ವರ್ಷ ಇಂದಿನ ದಿನದಿಂದ ಪ್ರಾರಂಭವಾಯಿತು. ಹೊಸ ಸಾಹಸದಿಂದ ಹಿಡಿದ ಕೆಲಸ ಮುಂದುವರೆಸು.‌‌‌ ಒಂದು ದಿನ‌‌‌‌‌‌‌‌‌‌‌ ಅಥವಾ ಅಲ್ಪ ಸಮಯದಲ್ಲೇ ಜಯಗಳಿಸುವೆನೆಂದು ಯಾವಾಗಲೂ ನಿರೀಕ್ಷೆಯನ್ನು ಇಟ್ಟುಕೊಳ್ಳಬೇಡ ನಾನು ಯಾವಾಗಲೂ ಅತ್ಯುನ್ನತವಾದ ಆದರ್ಶವನ್ನೇ ಆಶ್ರಯಿಸುತ್ತೇನೆ ಹಾಗೂ ಸ್ಥಿರವಾಗಿರುತ್ತೇನೆಂದು ನಿಶ್ಚಯ ಮಾಡಿಕೋ, ಅಸೂಯೆ, ಸ್ವಾರ್ಥವನ್ನು ತೊರೆದು, ನನ್ನ ದೇಶಕ್ಕೆ ಮತ್ತು ಮಾನವತೆಗೆ ನಿರಂತರವಾಗಿ ವಿಧೇಯನಾಗಿರುತ್ತೇನೆಂದು ಮತ್ತು ಸತ್ಯ ನಿಷ್ಠೆಗೆ ಬದ್ಧನಾಗಿರುತ್ತೇನೆಂದು ನಿಶ್ಚಯಿಸು ಆಗ ಜಗತ್ತನ್ನೇ ಅಲ್ಲಾಡಿಸುವ ಶಕ್ತಿಯನ್ನು ಆ ಭಗವಂತನೇ ನಿನಗೆ ಕರುಣಿಸುತ್ತಾನೆ.

ನಿನ್ನ ಮನಸ್ಸಿನಲ್ಲಿ ಅಹಂಕಾರವೇನಾದರೂ ಬಂದರೆ ನಿನ್ನ ಹತ್ತಿರದಲ್ಲಿ ಇರುವ ಸ್ಮಶಾನಕ್ಕೆ ಒಮ್ಮೆಭೇಟಿ ಕೊಡು ಅಲ್ಲಿ ನಿನಗಿಂತ ಶ್ರೀಮಂತ, ಶಕ್ತಿವಂತ, ಸೌಂದರ್ಯವಂತ, ಹಾಗೂ ನಿನಗಿಂತ ಬಲಾಡ್ಯ ದೇಹವನ್ನು ಹೊ०ದಿದಂತಹ ವ್ಯಕ್ತಿ ,6×3,ಅಡಿ, ಮಣ್ಣಲ್ಲಿ ಮಣ್ಣಾಗಿ ಹೋಗಿದ್ದರೆ ಅಥವಾ ಕಟ್ಟಿಗೆಯ ನಡುವೆ ಬೂದಿಯಾಗುತ್ತಿದ್ದರೆ, ಒಂದಲ್ಲ ಒಂದು ದಿನ ನಿನಗೂ ಅದೇ ಸ್ಥಳಕ್ಕೆ ಹೋಗಲಿಕ್ಕೆ ಇದೆ. ಇದನ್ನು ಅರ್ಥಮಾಡಿಕೊಂಡವನ ಮನಸ್ಸಿನಲ್ಲಿ ಒಂದು ಅಣುವಿನಷ್ಟು ಅಹಂಕಾರ ಬರಲಾರದು.

ಚಿಂತಿಸುವವನಿಗೆ ದೃಷ್ಟಾಂತವಿದೆ. ನಮಗೆ ಸಿಹಿಯ ರುಚಿ ಅರಿವಾಗಬೇಕೆಂದರೆ ಮೊದಲು ಕಹಿಯ ಅನುಭವ ಇರಬೇಕು, ಕಷ್ಟದ ಬೆಲೆ ತಿಳಿದಿದ್ದರೆ ಸುಖದ ಅನುಭವ ಪ್ರತಿಫಲ ಏನು ಎಂದು ತಿಳಿಯುತ್ತದೆ.  ಅರ್ಥ ಮಾಡಿಕೊಂಡರೆ ಜೀವನ ತುಂಬ ಸುಂದರ, ಸಹಾಯ ಪಡೆದವರನ್ನು ಎಂದಿಗೂ ಮರೆಯಬಾರದು,
ಸಹಾಯ ಮಾಡಿದರೆ ಅದನ್ನು ಪದೇ ಪದೇ ನೆನಪಿಸಬಾರದು. ನಮ್ಮ ಶಕ್ತಿ ಹೆಚ್ಚಾಗುವುದು ನಮ್ಮ ಗೆಲುವುಗಳಿಂದಲ್ಲ. ಗೆಲುವಿಗಾಗಿ ನಾವುನಡೆಸುವ ಹೋರಾಟಗಳಿಂದ. ಆದುದರಿಂದ ಎಂತಹ ಪರಿಸ್ಥಿಯಲ್ಲೂ ಶರಣಾಗತರಾಗದಿರುವುದೇ ನಿಜವಾದ ಶಕ್ತಿ. ಆ ಅನುಭವ ನಮನ್ನು ಯಶಸ್ಸಿನಿಂದ ಜಗತ್ತಿಗೆ ಪರಿಚಯಿಸುತ್ತದೆ.

ಹಿಂದಿನ ವಷ೯ದ ಕೊನೆಯ ದಿನ ಮುಗಿದು ಹೊಸ ವರ್ಷ ಬಂದೇ ಬಿಟ್ಟಿತು, ನಮ್ಮ ಕಣ್ಣ್ ಗಳಲ್ಲಿ ನೀರು ತಂದವರಿಗೆ ಹಾಗೂ ಮುಖದಲ್ಲಿ ನಗು ತಂದವರಿಗೆ, ಇಬ್ಬರಿಗೂ ಧನ್ಯವಾದಗಳು ಹೇಳುವ ಮನಸ್ಸು ನಮ್ಮದಾಗಬೇಕು. 2024ರ ಹೊಸ ವರ್ಷ ದೊಡ್ಡ ಯಶಸ್ಸಿನ ವರ್ಷ ನಿಮ್ಮದಾಗಲಿ ನಿಮ್ಮ ಕನಸುಗಳು ನನಸಾಗಲಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

5 minutes ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

12 minutes ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

52 minutes ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

3 hours ago

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?

ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…

5 hours ago

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

10 hours ago