Advertisement
Opinion

ಹೊಸ ವರ್ಷದ ಶುಭಾಶಯಗಳು | ಅಸೂಯೆ, ಸ್ವಾರ್ಥವನ್ನು ತೊರೆದು ಬದುಕೋಣ…

Share

ಹೊಸ ವರ್ಷದ ಶುಭಾಶಯಗಳು(Happy New Year), 2023 ವರ್ಷ ಮುಗಿದೇ ಹೋಯಿತು…. 2024ರ ವರ್ಷ ಇಂದಿನ ದಿನದಿಂದ ಪ್ರಾರಂಭವಾಯಿತು. ಹೊಸ ಸಾಹಸದಿಂದ ಹಿಡಿದ ಕೆಲಸ ಮುಂದುವರೆಸು.‌‌‌ ಒಂದು ದಿನ‌‌‌‌‌‌‌‌‌‌‌ ಅಥವಾ ಅಲ್ಪ ಸಮಯದಲ್ಲೇ ಜಯಗಳಿಸುವೆನೆಂದು ಯಾವಾಗಲೂ ನಿರೀಕ್ಷೆಯನ್ನು ಇಟ್ಟುಕೊಳ್ಳಬೇಡ ನಾನು ಯಾವಾಗಲೂ ಅತ್ಯುನ್ನತವಾದ ಆದರ್ಶವನ್ನೇ ಆಶ್ರಯಿಸುತ್ತೇನೆ ಹಾಗೂ ಸ್ಥಿರವಾಗಿರುತ್ತೇನೆಂದು ನಿಶ್ಚಯ ಮಾಡಿಕೋ, ಅಸೂಯೆ, ಸ್ವಾರ್ಥವನ್ನು ತೊರೆದು, ನನ್ನ ದೇಶಕ್ಕೆ ಮತ್ತು ಮಾನವತೆಗೆ ನಿರಂತರವಾಗಿ ವಿಧೇಯನಾಗಿರುತ್ತೇನೆಂದು ಮತ್ತು ಸತ್ಯ ನಿಷ್ಠೆಗೆ ಬದ್ಧನಾಗಿರುತ್ತೇನೆಂದು ನಿಶ್ಚಯಿಸು ಆಗ ಜಗತ್ತನ್ನೇ ಅಲ್ಲಾಡಿಸುವ ಶಕ್ತಿಯನ್ನು ಆ ಭಗವಂತನೇ ನಿನಗೆ ಕರುಣಿಸುತ್ತಾನೆ.

ನಿನ್ನ ಮನಸ್ಸಿನಲ್ಲಿ ಅಹಂಕಾರವೇನಾದರೂ ಬಂದರೆ ನಿನ್ನ ಹತ್ತಿರದಲ್ಲಿ ಇರುವ ಸ್ಮಶಾನಕ್ಕೆ ಒಮ್ಮೆಭೇಟಿ ಕೊಡು ಅಲ್ಲಿ ನಿನಗಿಂತ ಶ್ರೀಮಂತ, ಶಕ್ತಿವಂತ, ಸೌಂದರ್ಯವಂತ, ಹಾಗೂ ನಿನಗಿಂತ ಬಲಾಡ್ಯ ದೇಹವನ್ನು ಹೊ०ದಿದಂತಹ ವ್ಯಕ್ತಿ ,6×3,ಅಡಿ, ಮಣ್ಣಲ್ಲಿ ಮಣ್ಣಾಗಿ ಹೋಗಿದ್ದರೆ ಅಥವಾ ಕಟ್ಟಿಗೆಯ ನಡುವೆ ಬೂದಿಯಾಗುತ್ತಿದ್ದರೆ, ಒಂದಲ್ಲ ಒಂದು ದಿನ ನಿನಗೂ ಅದೇ ಸ್ಥಳಕ್ಕೆ ಹೋಗಲಿಕ್ಕೆ ಇದೆ. ಇದನ್ನು ಅರ್ಥಮಾಡಿಕೊಂಡವನ ಮನಸ್ಸಿನಲ್ಲಿ ಒಂದು ಅಣುವಿನಷ್ಟು ಅಹಂಕಾರ ಬರಲಾರದು.

ಚಿಂತಿಸುವವನಿಗೆ ದೃಷ್ಟಾಂತವಿದೆ. ನಮಗೆ ಸಿಹಿಯ ರುಚಿ ಅರಿವಾಗಬೇಕೆಂದರೆ ಮೊದಲು ಕಹಿಯ ಅನುಭವ ಇರಬೇಕು, ಕಷ್ಟದ ಬೆಲೆ ತಿಳಿದಿದ್ದರೆ ಸುಖದ ಅನುಭವ ಪ್ರತಿಫಲ ಏನು ಎಂದು ತಿಳಿಯುತ್ತದೆ.  ಅರ್ಥ ಮಾಡಿಕೊಂಡರೆ ಜೀವನ ತುಂಬ ಸುಂದರ, ಸಹಾಯ ಪಡೆದವರನ್ನು ಎಂದಿಗೂ ಮರೆಯಬಾರದು,
ಸಹಾಯ ಮಾಡಿದರೆ ಅದನ್ನು ಪದೇ ಪದೇ ನೆನಪಿಸಬಾರದು. ನಮ್ಮ ಶಕ್ತಿ ಹೆಚ್ಚಾಗುವುದು ನಮ್ಮ ಗೆಲುವುಗಳಿಂದಲ್ಲ. ಗೆಲುವಿಗಾಗಿ ನಾವುನಡೆಸುವ ಹೋರಾಟಗಳಿಂದ. ಆದುದರಿಂದ ಎಂತಹ ಪರಿಸ್ಥಿಯಲ್ಲೂ ಶರಣಾಗತರಾಗದಿರುವುದೇ ನಿಜವಾದ ಶಕ್ತಿ. ಆ ಅನುಭವ ನಮನ್ನು ಯಶಸ್ಸಿನಿಂದ ಜಗತ್ತಿಗೆ ಪರಿಚಯಿಸುತ್ತದೆ.

ಹಿಂದಿನ ವಷ೯ದ ಕೊನೆಯ ದಿನ ಮುಗಿದು ಹೊಸ ವರ್ಷ ಬಂದೇ ಬಿಟ್ಟಿತು, ನಮ್ಮ ಕಣ್ಣ್ ಗಳಲ್ಲಿ ನೀರು ತಂದವರಿಗೆ ಹಾಗೂ ಮುಖದಲ್ಲಿ ನಗು ತಂದವರಿಗೆ, ಇಬ್ಬರಿಗೂ ಧನ್ಯವಾದಗಳು ಹೇಳುವ ಮನಸ್ಸು ನಮ್ಮದಾಗಬೇಕು. 2024ರ ಹೊಸ ವರ್ಷ ದೊಡ್ಡ ಯಶಸ್ಸಿನ ವರ್ಷ ನಿಮ್ಮದಾಗಲಿ ನಿಮ್ಮ ಕನಸುಗಳು ನನಸಾಗಲಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

4 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

4 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

15 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

15 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

15 hours ago