ಮಾಂಸಾಹಾರ ಸೇವನೆಯ ಕಾರಣದಿಂದ ದೇವಸ್ಥಾನ ಪ್ರವೇಶಿಸದ ಎನ್‌ಸಿಪಿ ನಾಯಕ ಶರದ್‌ ಪವಾರ್..!‌ |

May 28, 2022
6:26 PM

ಎಲ್ಲೆಡೆಯೂ ಧಾರ್ಮಿಕತೆಯ ಬಗ್ಗೆ ಚರ್ಚೆಯಾಗುತ್ತಿದೆ. ಧಾರ್ಮಿಕ ಆಚರಣೆ, ಪದ್ಧತಿ, ಪೂಜೆ ಇತ್ಯಾದಿಗಳು ಖಾಸಗಿ ವಿಷಯವಾದರೂ ಇಂದು ಬಹಿರಂಗವಾಗಿ ಚರ್ಚೆಯಾಗುತ್ತಿರುವ ವಿಷಯ. ಈ ನಡುವೆಯೇ ಮಾಂಸಾಹಾರ ಸೇವಿಸಿದ ಕಾರಣದಿಂದ ದೇವಸ್ಥಾನವನ್ನು  ಪ್ರವೇಶಿಸದೇ ಈಗ ಗಮನ ಸೆಳೆದಿರುವವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್.

ಪುಣೆಯ ಪ್ರಸಿದ್ಧ ದಗ್ದುಶೇತ್ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾಂಸಾಹಾರ ಸೇವಿಸಿದ್ದರಿಂದ ದೇವಸ್ಥಾನ ಆವರಣದ ಹೊರಗಿನಿಂದ ದರ್ಶನ ಪಡೆದರು ಎಂಬುದನ್ನು ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್ ಸ್ಪಷ್ಟ ಪಡಿಸಿದ್ದಾರೆ. ದಗ್ದುಶೇತ್ ಗಣಪತಿ ದೇವಸ್ಥಾನದ ಪಕ್ಕದಲ್ಲಿರುವ ಜಮೀನನ್ನು ದೇವಸ್ಥಾನದ ಟ್ರಸ್ಟ್‌ಗೆ ಹಸ್ತಾಂತರಿಸಬೇಕೆಂಬ ಬಹುದಿನಗಳ ಬೇಡಿಕೆ ಹಿನ್ನೆಲೆಯಲ್ಲಿ ಪವಾರ್ ಪುಣೆಗೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಪವಾರ್ ಅವರು ದೇವಸ್ಥಾನದ ಆವರಣ ಪ್ರವೇಶಿಸದೇ ಹೊರಗಿನಿಂದ ದರ್ಶನ ಪಡೆದಿದ್ದರಿಂದ ಹಲವಾರು ಪ್ರಶ್ನೆಗಳು  ಎದ್ದಿದ್ದವು. ಈ ಬಗ್ಗೆ ಸ್ಪಷ್ಟಪಡಿಸಿದ ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್,  ಶರದ್‌ ಪವಾರ್‌ ಅವರು ಹಿಂದಿನ ದಿನ ಮಾಂಸಾಹಾರವನ್ನು ಸೇವಿಸಿದ್ದರಿಂದ ದೇವಸ್ಥಾನದ ಒಳಗೆ ಹೋಗುವುದು ಸೂಕ್ತವಲ್ಲ ಎಂದು ಭಾವಿಸಿ ಹೊರಗಿನಿಂದ ದರ್ಶನ ಪಡೆದರು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror