ರಾಷ್ಟ್ರೀಯ

ಮಾಂಸಾಹಾರ ಸೇವನೆಯ ಕಾರಣದಿಂದ ದೇವಸ್ಥಾನ ಪ್ರವೇಶಿಸದ ಎನ್‌ಸಿಪಿ ನಾಯಕ ಶರದ್‌ ಪವಾರ್..!‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಲ್ಲೆಡೆಯೂ ಧಾರ್ಮಿಕತೆಯ ಬಗ್ಗೆ ಚರ್ಚೆಯಾಗುತ್ತಿದೆ. ಧಾರ್ಮಿಕ ಆಚರಣೆ, ಪದ್ಧತಿ, ಪೂಜೆ ಇತ್ಯಾದಿಗಳು ಖಾಸಗಿ ವಿಷಯವಾದರೂ ಇಂದು ಬಹಿರಂಗವಾಗಿ ಚರ್ಚೆಯಾಗುತ್ತಿರುವ ವಿಷಯ. ಈ ನಡುವೆಯೇ ಮಾಂಸಾಹಾರ ಸೇವಿಸಿದ ಕಾರಣದಿಂದ ದೇವಸ್ಥಾನವನ್ನು  ಪ್ರವೇಶಿಸದೇ ಈಗ ಗಮನ ಸೆಳೆದಿರುವವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್.

Advertisement

ಪುಣೆಯ ಪ್ರಸಿದ್ಧ ದಗ್ದುಶೇತ್ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾಂಸಾಹಾರ ಸೇವಿಸಿದ್ದರಿಂದ ದೇವಸ್ಥಾನ ಆವರಣದ ಹೊರಗಿನಿಂದ ದರ್ಶನ ಪಡೆದರು ಎಂಬುದನ್ನು ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್ ಸ್ಪಷ್ಟ ಪಡಿಸಿದ್ದಾರೆ. ದಗ್ದುಶೇತ್ ಗಣಪತಿ ದೇವಸ್ಥಾನದ ಪಕ್ಕದಲ್ಲಿರುವ ಜಮೀನನ್ನು ದೇವಸ್ಥಾನದ ಟ್ರಸ್ಟ್‌ಗೆ ಹಸ್ತಾಂತರಿಸಬೇಕೆಂಬ ಬಹುದಿನಗಳ ಬೇಡಿಕೆ ಹಿನ್ನೆಲೆಯಲ್ಲಿ ಪವಾರ್ ಪುಣೆಗೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಪವಾರ್ ಅವರು ದೇವಸ್ಥಾನದ ಆವರಣ ಪ್ರವೇಶಿಸದೇ ಹೊರಗಿನಿಂದ ದರ್ಶನ ಪಡೆದಿದ್ದರಿಂದ ಹಲವಾರು ಪ್ರಶ್ನೆಗಳು  ಎದ್ದಿದ್ದವು. ಈ ಬಗ್ಗೆ ಸ್ಪಷ್ಟಪಡಿಸಿದ ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್,  ಶರದ್‌ ಪವಾರ್‌ ಅವರು ಹಿಂದಿನ ದಿನ ಮಾಂಸಾಹಾರವನ್ನು ಸೇವಿಸಿದ್ದರಿಂದ ದೇವಸ್ಥಾನದ ಒಳಗೆ ಹೋಗುವುದು ಸೂಕ್ತವಲ್ಲ ಎಂದು ಭಾವಿಸಿ ಹೊರಗಿನಿಂದ ದರ್ಶನ ಪಡೆದರು ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

8 minutes ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

22 minutes ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

39 minutes ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

47 minutes ago

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

10 hours ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

13 hours ago