ಎಲ್ಲೆಡೆಯೂ ಧಾರ್ಮಿಕತೆಯ ಬಗ್ಗೆ ಚರ್ಚೆಯಾಗುತ್ತಿದೆ. ಧಾರ್ಮಿಕ ಆಚರಣೆ, ಪದ್ಧತಿ, ಪೂಜೆ ಇತ್ಯಾದಿಗಳು ಖಾಸಗಿ ವಿಷಯವಾದರೂ ಇಂದು ಬಹಿರಂಗವಾಗಿ ಚರ್ಚೆಯಾಗುತ್ತಿರುವ ವಿಷಯ. ಈ ನಡುವೆಯೇ ಮಾಂಸಾಹಾರ ಸೇವಿಸಿದ ಕಾರಣದಿಂದ ದೇವಸ್ಥಾನವನ್ನು ಪ್ರವೇಶಿಸದೇ ಈಗ ಗಮನ ಸೆಳೆದಿರುವವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್.
ಪುಣೆಯ ಪ್ರಸಿದ್ಧ ದಗ್ದುಶೇತ್ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾಂಸಾಹಾರ ಸೇವಿಸಿದ್ದರಿಂದ ದೇವಸ್ಥಾನ ಆವರಣದ ಹೊರಗಿನಿಂದ ದರ್ಶನ ಪಡೆದರು ಎಂಬುದನ್ನು ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್ ಸ್ಪಷ್ಟ ಪಡಿಸಿದ್ದಾರೆ. ದಗ್ದುಶೇತ್ ಗಣಪತಿ ದೇವಸ್ಥಾನದ ಪಕ್ಕದಲ್ಲಿರುವ ಜಮೀನನ್ನು ದೇವಸ್ಥಾನದ ಟ್ರಸ್ಟ್ಗೆ ಹಸ್ತಾಂತರಿಸಬೇಕೆಂಬ ಬಹುದಿನಗಳ ಬೇಡಿಕೆ ಹಿನ್ನೆಲೆಯಲ್ಲಿ ಪವಾರ್ ಪುಣೆಗೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಪವಾರ್ ಅವರು ದೇವಸ್ಥಾನದ ಆವರಣ ಪ್ರವೇಶಿಸದೇ ಹೊರಗಿನಿಂದ ದರ್ಶನ ಪಡೆದಿದ್ದರಿಂದ ಹಲವಾರು ಪ್ರಶ್ನೆಗಳು ಎದ್ದಿದ್ದವು. ಈ ಬಗ್ಗೆ ಸ್ಪಷ್ಟಪಡಿಸಿದ ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್, ಶರದ್ ಪವಾರ್ ಅವರು ಹಿಂದಿನ ದಿನ ಮಾಂಸಾಹಾರವನ್ನು ಸೇವಿಸಿದ್ದರಿಂದ ದೇವಸ್ಥಾನದ ಒಳಗೆ ಹೋಗುವುದು ಸೂಕ್ತವಲ್ಲ ಎಂದು ಭಾವಿಸಿ ಹೊರಗಿನಿಂದ ದರ್ಶನ ಪಡೆದರು ಎಂದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…