Advertisement
ರಾಷ್ಟ್ರೀಯ

ಮಾಂಸಾಹಾರ ಸೇವನೆಯ ಕಾರಣದಿಂದ ದೇವಸ್ಥಾನ ಪ್ರವೇಶಿಸದ ಎನ್‌ಸಿಪಿ ನಾಯಕ ಶರದ್‌ ಪವಾರ್..!‌ |

Share

ಎಲ್ಲೆಡೆಯೂ ಧಾರ್ಮಿಕತೆಯ ಬಗ್ಗೆ ಚರ್ಚೆಯಾಗುತ್ತಿದೆ. ಧಾರ್ಮಿಕ ಆಚರಣೆ, ಪದ್ಧತಿ, ಪೂಜೆ ಇತ್ಯಾದಿಗಳು ಖಾಸಗಿ ವಿಷಯವಾದರೂ ಇಂದು ಬಹಿರಂಗವಾಗಿ ಚರ್ಚೆಯಾಗುತ್ತಿರುವ ವಿಷಯ. ಈ ನಡುವೆಯೇ ಮಾಂಸಾಹಾರ ಸೇವಿಸಿದ ಕಾರಣದಿಂದ ದೇವಸ್ಥಾನವನ್ನು  ಪ್ರವೇಶಿಸದೇ ಈಗ ಗಮನ ಸೆಳೆದಿರುವವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್.

ಪುಣೆಯ ಪ್ರಸಿದ್ಧ ದಗ್ದುಶೇತ್ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾಂಸಾಹಾರ ಸೇವಿಸಿದ್ದರಿಂದ ದೇವಸ್ಥಾನ ಆವರಣದ ಹೊರಗಿನಿಂದ ದರ್ಶನ ಪಡೆದರು ಎಂಬುದನ್ನು ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್ ಸ್ಪಷ್ಟ ಪಡಿಸಿದ್ದಾರೆ. ದಗ್ದುಶೇತ್ ಗಣಪತಿ ದೇವಸ್ಥಾನದ ಪಕ್ಕದಲ್ಲಿರುವ ಜಮೀನನ್ನು ದೇವಸ್ಥಾನದ ಟ್ರಸ್ಟ್‌ಗೆ ಹಸ್ತಾಂತರಿಸಬೇಕೆಂಬ ಬಹುದಿನಗಳ ಬೇಡಿಕೆ ಹಿನ್ನೆಲೆಯಲ್ಲಿ ಪವಾರ್ ಪುಣೆಗೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಪವಾರ್ ಅವರು ದೇವಸ್ಥಾನದ ಆವರಣ ಪ್ರವೇಶಿಸದೇ ಹೊರಗಿನಿಂದ ದರ್ಶನ ಪಡೆದಿದ್ದರಿಂದ ಹಲವಾರು ಪ್ರಶ್ನೆಗಳು  ಎದ್ದಿದ್ದವು. ಈ ಬಗ್ಗೆ ಸ್ಪಷ್ಟಪಡಿಸಿದ ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್,  ಶರದ್‌ ಪವಾರ್‌ ಅವರು ಹಿಂದಿನ ದಿನ ಮಾಂಸಾಹಾರವನ್ನು ಸೇವಿಸಿದ್ದರಿಂದ ದೇವಸ್ಥಾನದ ಒಳಗೆ ಹೋಗುವುದು ಸೂಕ್ತವಲ್ಲ ಎಂದು ಭಾವಿಸಿ ಹೊರಗಿನಿಂದ ದರ್ಶನ ಪಡೆದರು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago