Advertisement
ರಾಷ್ಟ್ರೀಯ

ಮಾಂಸಾಹಾರ ಸೇವನೆಯ ಕಾರಣದಿಂದ ದೇವಸ್ಥಾನ ಪ್ರವೇಶಿಸದ ಎನ್‌ಸಿಪಿ ನಾಯಕ ಶರದ್‌ ಪವಾರ್..!‌ |

Share

ಎಲ್ಲೆಡೆಯೂ ಧಾರ್ಮಿಕತೆಯ ಬಗ್ಗೆ ಚರ್ಚೆಯಾಗುತ್ತಿದೆ. ಧಾರ್ಮಿಕ ಆಚರಣೆ, ಪದ್ಧತಿ, ಪೂಜೆ ಇತ್ಯಾದಿಗಳು ಖಾಸಗಿ ವಿಷಯವಾದರೂ ಇಂದು ಬಹಿರಂಗವಾಗಿ ಚರ್ಚೆಯಾಗುತ್ತಿರುವ ವಿಷಯ. ಈ ನಡುವೆಯೇ ಮಾಂಸಾಹಾರ ಸೇವಿಸಿದ ಕಾರಣದಿಂದ ದೇವಸ್ಥಾನವನ್ನು  ಪ್ರವೇಶಿಸದೇ ಈಗ ಗಮನ ಸೆಳೆದಿರುವವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್.

ಪುಣೆಯ ಪ್ರಸಿದ್ಧ ದಗ್ದುಶೇತ್ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾಂಸಾಹಾರ ಸೇವಿಸಿದ್ದರಿಂದ ದೇವಸ್ಥಾನ ಆವರಣದ ಹೊರಗಿನಿಂದ ದರ್ಶನ ಪಡೆದರು ಎಂಬುದನ್ನು ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್ ಸ್ಪಷ್ಟ ಪಡಿಸಿದ್ದಾರೆ. ದಗ್ದುಶೇತ್ ಗಣಪತಿ ದೇವಸ್ಥಾನದ ಪಕ್ಕದಲ್ಲಿರುವ ಜಮೀನನ್ನು ದೇವಸ್ಥಾನದ ಟ್ರಸ್ಟ್‌ಗೆ ಹಸ್ತಾಂತರಿಸಬೇಕೆಂಬ ಬಹುದಿನಗಳ ಬೇಡಿಕೆ ಹಿನ್ನೆಲೆಯಲ್ಲಿ ಪವಾರ್ ಪುಣೆಗೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಪವಾರ್ ಅವರು ದೇವಸ್ಥಾನದ ಆವರಣ ಪ್ರವೇಶಿಸದೇ ಹೊರಗಿನಿಂದ ದರ್ಶನ ಪಡೆದಿದ್ದರಿಂದ ಹಲವಾರು ಪ್ರಶ್ನೆಗಳು  ಎದ್ದಿದ್ದವು. ಈ ಬಗ್ಗೆ ಸ್ಪಷ್ಟಪಡಿಸಿದ ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗ್ತಾಪ್,  ಶರದ್‌ ಪವಾರ್‌ ಅವರು ಹಿಂದಿನ ದಿನ ಮಾಂಸಾಹಾರವನ್ನು ಸೇವಿಸಿದ್ದರಿಂದ ದೇವಸ್ಥಾನದ ಒಳಗೆ ಹೋಗುವುದು ಸೂಕ್ತವಲ್ಲ ಎಂದು ಭಾವಿಸಿ ಹೊರಗಿನಿಂದ ದರ್ಶನ ಪಡೆದರು ಎಂದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

15 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

21 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago