ಕೋವಿಡ್ ಏರಿಕೆ: ಹರಿದ್ವಾರದಲ್ಲಿ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಭಕ್ತರಿಂದ ಪವಿತ್ರ ಸ್ನಾನ ನಿಷೇಧ

January 11, 2022
9:08 PM

ಉತ್ತರಾಖಂಡ್‌ನಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ನಡುವೆ, ಹರಿದ್ವಾರ ಜಿಲ್ಲಾಡಳಿತವು ಜ.14ರಂದು ನಡೆಯಲಿರುವ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಭಕ್ರರು ಪವಿತ್ರ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾತ್ರವಲ್ಲದೇ ರಾಜ್ಯ ಆಡಳಿತವು ಹರ್ ಕಿ ಪೌರಿ ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸಿದೆ.

ಜನವರಿ 14 ರಂದು ರಾತ್ರಿ 10 ರಿಂದ ಬೆಳಗ್ಗೆ 6 ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುವುದು. ಮಾತ್ರವಲ್ಲದೇ ಉತ್ತರಾಖಂಡ ಸರ್ಕಾರವು ಈಗಾಗಲೇ ಎಲ್ಲಾ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಸೋಮವಾರ ಮುಚ್ಚಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಜನವರಿ 16ರವೆಗೆ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಹರಿದ್ವಾರದ ಡಿಎಂ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಕೋವಿಡ್-19 ಏರಿಕೆಯಾಗುವ ಹಿನ್ನಲೆಯಿಂದ ಫೆಬ್ರವರಿ 14 ರಂದು ಒಂದೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಉತ್ತಾರಾಖಂಡದ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ
May 12, 2026
7:37 AM
by: ಮಿರರ್‌ ಡೆಸ್ಕ್
ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ
May 2, 2026
5:42 PM
by: ಮಿರರ್‌ ಡೆಸ್ಕ್
ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ
May 2, 2026
5:35 PM
by: ಮಿರರ್‌ ಡೆಸ್ಕ್
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror