ಧರ್ಮಕ್ಕೂ ಮೀರಿದ ರಕ್ಷಣೆಯ ಭಾವ | ಗ್ರಾಮೀಣ ಭಾಗದಿಂದ ನಾಡಿಗೆ ಶಾಂತಿ-ಸೌಹಾರ್ದತೆಯ ಪಾಠ | ಪ್ರಕೃತಿ ಕಲಿಸಿದ ಎಚ್ಚರಿಕೆಯ ಕರೆ |

August 3, 2022
7:45 AM
ಇಡೀ ರಾಜ್ಯದಲ್ಲಿ ಕರಾವಳಿ ಕೊತ ಕೊತ ಎಂಬ ಸುದ್ದಿ ಬಿತ್ತಲಾಯಿತು. ಅದೇ ಎರಡು ದಿನಗಳ ಬಳಿಕ ಗ್ರಾಮೀಣ ಭಾಗ ನಿಜಕ್ಕೂ ಕೊತ ಕೊತವಾಗಿದೆ. ಯಾರೂ ಸದ್ದು ಮಾಡದೇ ಇದ್ದಾಗ ಪ್ರಕೃತಿಯೇ ಎಚ್ಚರಿಸಿದೆ. ಆಯತಪ್ಪಿ ನೀರಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಿದ ಸುದ್ದಿ ಈಗ ಸದ್ದು ಮಾಡಿದೆ. ಇಡೀ ನಾಡಿಗೆ ಶಾಂತಿ- ಸೌಹಾರ್ದತೆಯ ಪಾಠ ಕಲಿಸಿದೆ. ರಕ್ಷಣೆಯು ಧರ್ಮಾತೀತ, ಮನಸ್ಸುಗಳೂ ಧರ್ಮಾತೀತ ಎಂಬುದನ್ನು ಗ್ರಾಮೀಣ ಭಾಗ ಕಲಿಸಿದೆ. ಪ್ರಕೃತಿಯ ಅಬ್ಬರಿಸಿ ಶಾಂತವಾಗಿದೆ. ನಾಡೂ ಅದೇ ನಿರೀಕ್ಷೆಯಲ್ಲಿ…. ಆದ ಘಟನೆ ಇಲ್ಲಿದೆ……

ಎರಡು ದಿನಗಳ ಹಿಂದೆ  ಭಾರೀ ಮಳೆಯಿಂದಾಗಿ ಕಲ್ಮಕಾರು ಭಾಗದಿಂದ ಪ್ರವಾಹವೇ ಹರಿಯಿತು. ಇದರ ಕಾರಣದಿಂದ ಹರಿಹರ ಪಲ್ಲತ್ತಡ್ಕದಲ್ಲಿ ರಾಶಿ ಬಿದ್ದ ಮರದ ದಿಮ್ಮಿಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕ್ರೇನ್‌ ಆಪರೇಟರ್‌  ಹೊಳೆಯ ಪಕ್ಕದಲ್ಲಿ ನಿಂತಿದ್ದ ವೇಳೆ ನೀರಿಗೆ ಬಿದ್ದರು. ನೀರಿನಲ್ಲಿ ಈಜಲು ಕಷ್ಟಪಡುವುದರ ಅರಿತ ಯುವಕನೋರ್ವ ನದಿಗೆ ಹಾರಿ ಅವರನ್ನು ರಕ್ಷಿಸಿದರು. ನೀರಿಗೆ ಬಿದ್ದ ಕೇನ್‌ ಆಪರೇಟರ್‌ ಶರೀಫ್. ರಕ್ಷಣೆ ಮಾಡಿದವರು ಹರಿಹರ ನಿವಾಸಿ ಸೋಮಶೇಖರ್ ಕಟ್ಟೆಮನೆ.

Advertisement
Advertisement

ಹರಿಹರ ಸೇತುವೆಯಲ್ಲಿ ಸಿಲುಕಿದ್ದ ಮರದ ದಿಮ್ಮಿಗಳನ್ನು ತೆಗೆಯಲು ಪಂಜ ಸಮೀಪದ ಪಡ್ಪಿನಂಗಡಿ ನಿವಾಸಿ ಶರೀಫ್ ಎಂಬವರ ಕ್ರೇನ್ ಹಾಗೂ ಸ್ಥಳೀಯ ನಿವಾಸಿಯೋರ್ವರ ಜೆಸಿಬಿ ವಾಹನಗಳನ್ನು ತರಿಸಲಾಗಿತ್ತು. ಕಾರ್ಯಾಚರಣೆಯ ವೇಳೆ ಆಪರೇಟರ್ ಶರೀಫ್ ಕ್ರೇನ್ ನಿಂದ ಇಳಿದು ಹೊಳೆ ಪಕ್ಕದಲ್ಲಿ ನಿಂತು ನೋಡುತ್ತಿದಾಗ  ಮರದ ದಿಮ್ಮಿಯೊಂದು ತಾಗಿದ ಪರಿಣಾಮ ಹರಿಯುತ್ತಿರುವ ನೀರಿಗೆ ಶರೀಫ್‌ ಬಿದ್ದಿದ್ದರು. ಈ ವೇಳೆ ಹರಿಹರ ನಿವಾಸಿ ಸೋಮಶೇಖರ್ ಕಟ್ಟೆಮನೆ ಎಂಬವರು  ಹೊಳೆಗೆ ಜಿಗಿದು ಶರೀಫ್ ರನ್ನು ರಕ್ಷಿಸಿದ್ದಾರೆ. ಬಳಿಕ ಜೆಸಿಬಿ ಹಾಗೂ ಹಗ್ಗದ ಸಹಾಯದಿಂದ ಊರಿನ ಇತರರು ಸೇರಿ ಶರೀಫ್ ರನ್ನು ಮೇಲಕ್ಕೆತ್ತಿದ್ದಾರೆ.

Advertisement

ಸೋಮಶೇಖರ್ ಕಟ್ಟೆಮನೆಯವರ ಸಾಹಸವನ್ನು ಸಾಮಾಜಿಕ ಕಾರ್ಯಕರ್ತ ಗುರುಪ್ರಸಾದ್ ಪಂಜ ಹಾಗೂ ಆಶಿತ್‌ ಕಲ್ಲಾಜೆಯವರು ತಮ್ಮ ಫೇಸ್‍ಬುಕ್ ನಲ್ಲಿ ಹಂಚಿಕೊಂಡಿದ್ದರು. ಈ ಸುದ್ದಿ ಭಾರೀ ವೈರಲ್‌ ಆಗಿದೆ.  1000 ಕ್ಕೂ ಅಧಿಕ ಮಂದಿ ಶೇರ್‌ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಕೋಮು ಸಂಬಂಧಿತ ಅಶಾಂತಿಯ ಬೆನ್ನಲ್ಲೇ ಇಂತಹ ಘಟನೆ ನಡೆದಿರುವುದು ಗ್ರಾಮೀಣ ಭಾಗದಲ್ಲಿ ಇನ್ನೂ ಸೌಹಾರ್ದತೆಯ , ಶಾಂತಿಯ ವಾತಾವರಣ ಇದೆ ಎನ್ನುವ ಸಂದೇಶ ನೀಡಿದೆ. ಕರಾವಳಿಯ ಎಲ್ಲೂ ಕೊತ ಕೊತದ ಪರಿಸ್ಥಿತಿ ಇಲ್ಲ. ಇದರ ಜೊತೆಗೆ ಪ್ರಕೃತಿಯ ಎರಡೇ ಗಂಟೆಯ ಅಬ್ಬರಕ್ಕೆ ಇಡೀ ಊರೇ ನಿಜಕ್ಕೂ ಕೊತ  ಕೊತವಾಗಿದೆ, ಧರ್ಮ, ಜಾತಿ, ಅಭಿವೃದ್ಧಿ ಯಾವುದನ್ನೂ ಬಿಡದೇ ಪ್ರವಾಹ ಕೊಚ್ಚಿದೆ. ಈ ಮೂಲಕವೂ ಪ್ರಕೃತಿ ಎಚ್ಚರಿಸಿದೆ.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |
May 28, 2025
2:27 PM
by: ಸಾಯಿಶೇಖರ್ ಕರಿಕಳ
ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group