ಆರೋಗ್ಯ ವೃದ್ಧಿಗೆ ಸಿರಿಧಾನ್ಯ, ಸಾವಯವ ಉತ್ಪನ್ನಗಳ ಬಳಸಿ

January 24, 2026
11:27 PM

ಸಿರಿಧಾನ್ಯಗಳು ಹಾಗೂ ಸಾವಯವ ಆಹಾರ ಉತ್ಪನ್ನಗಳ ಬಳಕೆಯಿಂದ ಆರೋಗ್ಯವನ್ನು ಉತ್ತಮಪಡಿಸಬಹುದು ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಕುರಿತು ಅರಿವು ಮೂಡಿಸುವ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಹಾರ ಪದಾರ್ಥಗಳಲ್ಲಿ ವಿಷಕಾರಿ ಅಂಶಗಳು ಹೆಚ್ಚಾಗಿ ಮನುಷ್ಯನ ದೇಹ ಸೇರುತ್ತಿವೆ ಎಂದು ಎಚ್ಚರಿಸಿದರು. “ನಾವು ಸೇವಿಸುವ ಆಹಾರದಲ್ಲಿ ವಿಷಪದಾರ್ಥಗಳ ಪ್ರಮಾಣ ಹೆಚ್ಚುತ್ತಿದೆ. ಇದನ್ನು ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಗಂಭೀರವಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಆರೋಗ್ಯಕರ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯ,” ಎಂದು ಜಿಲ್ಲಾಧಿಕಾರಿ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೃಷಿ ಕ್ಷೇತ್ರ ಉದ್ಯಮವಾಗಿ ಪರಿವರ್ತನೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಸಾವಯವ ಕೃಷಿ ಹಾಗೂ ಗುಣಮಟ್ಟದ ಆಹಾರ ಉತ್ಪನ್ನಗಳ ಬಳಕೆ ಸವಾಲಿನ ಕೆಲಸವಾಗಿದೆ ಎಂದು ಲತಾ ಕುಮಾರಿ ಹೇಳಿದರು. ಸಾವಯವ ಕೃಷಿ ಪದ್ಧತಿಗಳು ರೈತರಿಗೂ ಮತ್ತು ಗ್ರಾಹಕರಿಗೂ ಆರೋಗ್ಯದ ದೃಷ್ಟಿಯಿಂದ ಲಾಭದಾಯಕವಾಗಿವೆ. ಆದರೆ ಜನರಲ್ಲಿ ಜಾಗೃತಿ ಕೊರತೆಯಿಂದ ಸಾವಯವ ಉತ್ಪನ್ನಗಳ ಬಳಕೆ ಇನ್ನೂ ಅಪೇಕ್ಷಿತ ಮಟ್ಟಕ್ಕೆ ತಲುಪಿಲ್ಲ ಎಂದು ಅವರು ತಿಳಿಸಿದರು.

ಸಿರಿಧಾನ್ಯಗಳು ಪೌಷ್ಟಿಕಾಂಶಗಳಿಂದ ತುಂಬಿದ್ದು, ಮಧುಮೇಹ, ಹೃದಯ ಕಾಯಿಲೆ ಹಾಗೂ ಜೀವನಶೈಲಿ ರೋಗಗಳನ್ನು ನಿಯಂತ್ರಿಸಲು ಸಹಕಾರಿ ಎಂದು ಜಿಲ್ಲಾಧಿಕಾರಿ ಹೇಳಿದರು. ಈ ನಿಟ್ಟಿನಲ್ಲಿ ಸರ್ಕಾರವು ಸಾವಯವ ಕೃಷಿ, ಸಾವಯವ ಉತ್ಪನ್ನಗಳ ಬಳಕೆ ಹಾಗೂ ಸಿರಿಧಾನ್ಯಗಳ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು. ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಬಳಕೆಯಿಂದ ಜನರ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ, ರೈತರಿಗೆ ಉತ್ತಮ ಮಾರುಕಟ್ಟೆ ಹಾಗೂ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅಭಿಪ್ರಾಯಪಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror