Advertisement
ಸುದ್ದಿಗಳು

ಆರೋಗ್ಯ ವೃದ್ಧಿಗೆ ಸಿರಿಧಾನ್ಯ, ಸಾವಯವ ಉತ್ಪನ್ನಗಳ ಬಳಸಿ

Share

ಸಿರಿಧಾನ್ಯಗಳು ಹಾಗೂ ಸಾವಯವ ಆಹಾರ ಉತ್ಪನ್ನಗಳ ಬಳಕೆಯಿಂದ ಆರೋಗ್ಯವನ್ನು ಉತ್ತಮಪಡಿಸಬಹುದು ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಕುರಿತು ಅರಿವು ಮೂಡಿಸುವ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಹಾರ ಪದಾರ್ಥಗಳಲ್ಲಿ ವಿಷಕಾರಿ ಅಂಶಗಳು ಹೆಚ್ಚಾಗಿ ಮನುಷ್ಯನ ದೇಹ ಸೇರುತ್ತಿವೆ ಎಂದು ಎಚ್ಚರಿಸಿದರು. “ನಾವು ಸೇವಿಸುವ ಆಹಾರದಲ್ಲಿ ವಿಷಪದಾರ್ಥಗಳ ಪ್ರಮಾಣ ಹೆಚ್ಚುತ್ತಿದೆ. ಇದನ್ನು ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಗಂಭೀರವಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಆರೋಗ್ಯಕರ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯ,” ಎಂದು ಜಿಲ್ಲಾಧಿಕಾರಿ ಹೇಳಿದರು.

Advertisement

ಇತ್ತೀಚಿನ ದಿನಗಳಲ್ಲಿ ಕೃಷಿ ಕ್ಷೇತ್ರ ಉದ್ಯಮವಾಗಿ ಪರಿವರ್ತನೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಸಾವಯವ ಕೃಷಿ ಹಾಗೂ ಗುಣಮಟ್ಟದ ಆಹಾರ ಉತ್ಪನ್ನಗಳ ಬಳಕೆ ಸವಾಲಿನ ಕೆಲಸವಾಗಿದೆ ಎಂದು ಲತಾ ಕುಮಾರಿ ಹೇಳಿದರು. ಸಾವಯವ ಕೃಷಿ ಪದ್ಧತಿಗಳು ರೈತರಿಗೂ ಮತ್ತು ಗ್ರಾಹಕರಿಗೂ ಆರೋಗ್ಯದ ದೃಷ್ಟಿಯಿಂದ ಲಾಭದಾಯಕವಾಗಿವೆ. ಆದರೆ ಜನರಲ್ಲಿ ಜಾಗೃತಿ ಕೊರತೆಯಿಂದ ಸಾವಯವ ಉತ್ಪನ್ನಗಳ ಬಳಕೆ ಇನ್ನೂ ಅಪೇಕ್ಷಿತ ಮಟ್ಟಕ್ಕೆ ತಲುಪಿಲ್ಲ ಎಂದು ಅವರು ತಿಳಿಸಿದರು.

ಸಿರಿಧಾನ್ಯಗಳು ಪೌಷ್ಟಿಕಾಂಶಗಳಿಂದ ತುಂಬಿದ್ದು, ಮಧುಮೇಹ, ಹೃದಯ ಕಾಯಿಲೆ ಹಾಗೂ ಜೀವನಶೈಲಿ ರೋಗಗಳನ್ನು ನಿಯಂತ್ರಿಸಲು ಸಹಕಾರಿ ಎಂದು ಜಿಲ್ಲಾಧಿಕಾರಿ ಹೇಳಿದರು. ಈ ನಿಟ್ಟಿನಲ್ಲಿ ಸರ್ಕಾರವು ಸಾವಯವ ಕೃಷಿ, ಸಾವಯವ ಉತ್ಪನ್ನಗಳ ಬಳಕೆ ಹಾಗೂ ಸಿರಿಧಾನ್ಯಗಳ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು. ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಬಳಕೆಯಿಂದ ಜನರ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ, ರೈತರಿಗೆ ಉತ್ತಮ ಮಾರುಕಟ್ಟೆ ಹಾಗೂ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅಭಿಪ್ರಾಯಪಟ್ಟರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

8 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

18 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago