Advertisement
MIRROR FOCUS

ಹಾಸನಾಂಬೆ ಹುಂಡಿ ಎಣಿಕೆ | 12.63 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ |

Share

ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಉತ್ಸವದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು  ಒಟ್ಟು 12 ಕೋಟಿ 63 ಲಕ್ಷದ 83 ಸಾವಿರದ 808 ರೂ ಹಣ, ಹಾಗೂ  51 ಗ್ರಾಂ ಚಿನ್ನ, 913 ಗ್ರಾಂ‌ ಬೆಳ್ಳಿ ಸಂಗ್ರಹ, 500 ಗ್ರಾಂ ತಾಮ್ರ ಸಂಗ್ರಹವಾಗಿದೆ ಎಂದು ಉಪ ವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿ ಮಾಹಿತಿ ನೀಡಿದ್ದಾರೆ. 

ಹುಂಡಿ ಎಣಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ದರ್ಶನದ ಸಾವಿರ ರೂ, ಮುನ್ನೂರು ರೂ ಟಿಕೆಟ್‌ ಮತ್ತು ಲಾಡು ಮಾರಾಟದಿಂದ 9 ಕೋಟಿ 67 ಲಕ್ಷದ 27 ಸಾವಿರದ 180 ರೂ ಸಂಗ್ರಹ ವಾಗಿದ್ದು ಹುಂಡಿಯಲ್ಲಿ 2 ಕೋಟಿ 55 ಲಕ್ಷದ 97 ಸಾವಿರದ 567 ರೂಪಾಯಿ ಸಂಗ್ರವಾಗಿದೆ ಎಂದು ಮಾಹಿತಿ ನೀಡಿದರು.  ಹಾಸನಾಂಬ ಉತ್ಸವದ ಜಾಹಿರಾತಿನಿಂದ 5,50,000 ರೂ. ಸೀರೆ ಮಾರಾಟದಿಂದ 2,00,305,  ಹಾಗೂ ದೇಣಿಗೆ ರೂಪದಲ್ಲಿ 40,908 ಮತ್ತು ತುಲಾಭಾರದಿಂದ  21,000 ರೂ.  ಇ ಹುಂಡಿಯಿಂದ 3,98,859 ರೂಪಾಯಿಗಳ ಆದಾಯ ಬಂದಿದೆ ಎಂದರು.  ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಇತಿಹಾಸದಲ್ಲೇ ಈ ಬಾರಿ ಆದಾಯ ಮೂಲಕ ದಾಖಲೆ ನಿರ್ಮಾಣವಾಗಿದ್ದು. ಕೇವಲ 9 ದಿನಗಳ ಉತ್ಸವದಲ್ಲಿ 20 ಲಕ್ಷದ 40 ಸಾವಿರ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

52 minutes ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

4 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

9 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

16 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

16 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago