ಜಿಲ್ಲೆ

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರಿಗೆ ತಲವಾರು ದಾಳಿ ಯತ್ನ ಪ್ರಕರಣ | ಆರೋಪಿ ಮನೆಯಿಂದ ಸ್ಪಾನರ್‌ ರಾಡ್‌ ವಶ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳೂರಿನಿಂದ ಹಿಂದಿರುಗುತ್ತಿದ್ದ ವೇಳೆ ಅವರ ಕಾರಿಗೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲವಾರು ಬೀಸಿದ ಬಗ್ಗೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿತ್ತು. ಇದೀಗ ಆರೋಪಿ ಮನೆಯಿಂದ “ ಸ್ಪಾನರ್ ರಾಡ್  ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪರಂಗಿಪೇಟೆಯ ಬಳಿ ನಡೆದ ತಲವಾರು ದಾಳಿ ಪ್ರಕರಣದ ಬಗ್ಗೆ ಬಂಟ್ವಾಳ ಪೊಲೀಸರು ವಿಚಾರಣೆ ನಡೆಸಿದಾಗ ಕೆಎಲ್‌ ರಿಜಿಸ್ಟ್ರೇಶನ್‌ ಸ್ಕಾರ್ಪಿಯೋ ವಾಹನದಲ್ಲಿದ್ದ ವ್ಯಕ್ತಿ  ತಲವಾರು ಝಲಪಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು. ಪೊಲೀಸ್‌ ತನಿಖೆಯಲ್ಲಿ ರಿಯಾಜ್‌ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ,ಆ ವ್ಯಕ್ತಿಯ ವಿರುದ್ಧ ಇದುವರೆಗೂ ಯಾವುದೇ ಕ್ರಿಮಿನಲ್‌ ಕೇಸು ದಾಖಲಾಗದೇ ಇರುವುದು  ಹಾಗೂ ತಲವಾರು ಇಲ್ಲದೇ ಇದ್ದದ್ದು ಬೆಳಕಿಗೆ ಬಂದಿತ್ತು. ಆದರೆ ವಾಹನ ಓವರ್‌ ಟೇಕ್‌ ಸಂಬಂಧಿತ ಪ್ರಕರಣ ಇದಾಗಿತ್ತು ಎಂದು ಜಿಲ್ಲಾ ಪೋಲೀಸ್‌ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದರು. ಹಾಗೂ ಬಳಿಕ ತನಿಖೆ ನಡೆಸಲಾಗಿತ್ತಿದೆ ಎಂದು ಮಾಹಿತಿ ನೀಡಿದ್ದರು.

ಆದರೆ ನಂತರ ಬೆಳವಣಿಗೆಯಲ್ಲಿ ಮತ್ತೆ ಆರೋಪಿ ರಿಯಾಜ್‌ ಮನೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರು  ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುಧವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಎರಡು ಮೊಬೈಲ್ ಫೋನ್‌ಗಳನ್ನು
ವಶಪಡಿಸಿಕೊಳ್ಳಲಾಗಿದೆ. ಸ್ಕಾರ್ಪಿಯೊದಿಂದ ಒಂದು ಸ್ಪ್ಯಾನರ್ ರಾಡ್  ವಶಪಡಿಸಿಕೊಳ್ಳಲಾಗಿದೆ. ಟಯರ್‌ ಬದಲಾವಣೆಯ ಸಮಯದಲ್ಲಿ ಇದನ್ನು ಬಳಕೆ ಮಾಡುತ್ತಾರೆ. ಇದೇ ಸ್ಪಾನರ್‌ ಹಿಡಿದು ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈದು ಹೊಳೆಯುವ ಎಲ್‌ ಆಕಾರದ ವಸ್ತುವಾಗಿರುವ ಕಾರಣ ಇದೇ ಸ್ಪಾನರ್‌ ಬಳಕೆ ಮಾಡಿರಬೇಕು ಎಂದು ಹೇಳಲಾಗುತ್ತಿದೆ.

ನಿನ್ನೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲವಾರು ಬೀಸಿಲ್ಲ, ವಾಹನ ಓವರ್‌ಟೇಕ್‌ ಮಾಡುವ ವಿಚಾರದ ಪ್ರಕರಣ ಎಂದಿರುವ ಘಟನೆ ಇಂದು ಟಯರ್‌ ಬದಲಾವಣೆ ಮಾಡುವ ರಾಡ್‌ ವಶಪಡಿಸಿಕೊಳ್ಳುವವರೆಗೆ ತಲಪಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ

ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…

37 minutes ago

ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |

ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…

20 hours ago

ಆಧುನಿಕ ಯುಗದಲ್ಲಿ ತಂತ್ರಜ್ಞ ದಲ್ಲಾಳಿಗಳು

ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…

1 day ago

ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |

ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…

1 day ago

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…

2 days ago

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆ | 800 ಕ್ಕೂ ಅಧಿಕ ವಿದ್ಯುತ್‌ ಕಂಬಗಳಿಗೆ ಹಾನಿ – ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…

2 days ago