Advertisement
ಜಿಲ್ಲೆ

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರಿಗೆ ತಲವಾರು ದಾಳಿ ಯತ್ನ ಪ್ರಕರಣ | ಆರೋಪಿ ಮನೆಯಿಂದ ಸ್ಪಾನರ್‌ ರಾಡ್‌ ವಶ…! |

Share

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳೂರಿನಿಂದ ಹಿಂದಿರುಗುತ್ತಿದ್ದ ವೇಳೆ ಅವರ ಕಾರಿಗೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲವಾರು ಬೀಸಿದ ಬಗ್ಗೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿತ್ತು. ಇದೀಗ ಆರೋಪಿ ಮನೆಯಿಂದ “ ಸ್ಪಾನರ್ ರಾಡ್  ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಂಗಿಪೇಟೆಯ ಬಳಿ ನಡೆದ ತಲವಾರು ದಾಳಿ ಪ್ರಕರಣದ ಬಗ್ಗೆ ಬಂಟ್ವಾಳ ಪೊಲೀಸರು ವಿಚಾರಣೆ ನಡೆಸಿದಾಗ ಕೆಎಲ್‌ ರಿಜಿಸ್ಟ್ರೇಶನ್‌ ಸ್ಕಾರ್ಪಿಯೋ ವಾಹನದಲ್ಲಿದ್ದ ವ್ಯಕ್ತಿ  ತಲವಾರು ಝಲಪಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು. ಪೊಲೀಸ್‌ ತನಿಖೆಯಲ್ಲಿ ರಿಯಾಜ್‌ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ,ಆ ವ್ಯಕ್ತಿಯ ವಿರುದ್ಧ ಇದುವರೆಗೂ ಯಾವುದೇ ಕ್ರಿಮಿನಲ್‌ ಕೇಸು ದಾಖಲಾಗದೇ ಇರುವುದು  ಹಾಗೂ ತಲವಾರು ಇಲ್ಲದೇ ಇದ್ದದ್ದು ಬೆಳಕಿಗೆ ಬಂದಿತ್ತು. ಆದರೆ ವಾಹನ ಓವರ್‌ ಟೇಕ್‌ ಸಂಬಂಧಿತ ಪ್ರಕರಣ ಇದಾಗಿತ್ತು ಎಂದು ಜಿಲ್ಲಾ ಪೋಲೀಸ್‌ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದರು. ಹಾಗೂ ಬಳಿಕ ತನಿಖೆ ನಡೆಸಲಾಗಿತ್ತಿದೆ ಎಂದು ಮಾಹಿತಿ ನೀಡಿದ್ದರು.

ಆದರೆ ನಂತರ ಬೆಳವಣಿಗೆಯಲ್ಲಿ ಮತ್ತೆ ಆರೋಪಿ ರಿಯಾಜ್‌ ಮನೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರು  ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುಧವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಎರಡು ಮೊಬೈಲ್ ಫೋನ್‌ಗಳನ್ನು
ವಶಪಡಿಸಿಕೊಳ್ಳಲಾಗಿದೆ. ಸ್ಕಾರ್ಪಿಯೊದಿಂದ ಒಂದು ಸ್ಪ್ಯಾನರ್ ರಾಡ್  ವಶಪಡಿಸಿಕೊಳ್ಳಲಾಗಿದೆ. ಟಯರ್‌ ಬದಲಾವಣೆಯ ಸಮಯದಲ್ಲಿ ಇದನ್ನು ಬಳಕೆ ಮಾಡುತ್ತಾರೆ. ಇದೇ ಸ್ಪಾನರ್‌ ಹಿಡಿದು ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈದು ಹೊಳೆಯುವ ಎಲ್‌ ಆಕಾರದ ವಸ್ತುವಾಗಿರುವ ಕಾರಣ ಇದೇ ಸ್ಪಾನರ್‌ ಬಳಕೆ ಮಾಡಿರಬೇಕು ಎಂದು ಹೇಳಲಾಗುತ್ತಿದೆ.

ನಿನ್ನೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲವಾರು ಬೀಸಿಲ್ಲ, ವಾಹನ ಓವರ್‌ಟೇಕ್‌ ಮಾಡುವ ವಿಚಾರದ ಪ್ರಕರಣ ಎಂದಿರುವ ಘಟನೆ ಇಂದು ಟಯರ್‌ ಬದಲಾವಣೆ ಮಾಡುವ ರಾಡ್‌ ವಶಪಡಿಸಿಕೊಳ್ಳುವವರೆಗೆ ತಲಪಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

5 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

5 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

22 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago