Advertisement
ಸುದ್ದಿಗಳು

ಕಪ್ಪು ಸೇಬು ನೋಡಿದ್ದೀರಾ? ಈ ಹಣ್ಣಿನಲ್ಲಿ ಇದೆ ಆರೋಗ್ಯದ ಗುಟ್ಟು

Share

ಟಿಬೆಟ್ ನ ನಿಂಗ್ವಿ ಪ್ರದೇಶದಲ್ಲಿ ಸುಮಾರು 3,500 ಮೀಟರ್ ಗಳಿಗಿಂತ ಹೆಚ್ಚಿನ ಎತ್ತರದಲ್ಲಿ ಬೆಳೆಯುವುದರಿಂದ ಈ ಹಣ್ಣನ್ನು ಕಪ್ಪು ವಜ್ರದ ಸೇಬು ಎಂದು ಕರೆಯುತ್ತಾರೆ. ಈ ಪ್ರದೇಶದಲ್ಲಿ ತಾಪಮಾನದಲ್ಲಿ ತೀವ್ರ ಏರುಪೇರು, ಕಡಿಮೆ ಆಮ್ಲಜನಕ ಮತ್ತು ಬಲವಾದ ಅಲ್ಟ್ರಾ ವೈಲೆಟ್ ಕೀರಣಗಳು ಇರುತ್ತದೆ. ಇದೇ ಕಾರಣಕ್ಕೆ ಈ ಸೇಬಿನ ಸಿಪ್ಪೆ ಗಾಢ ನೇರಳೆ ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಹೊರಗೆ ಕಪ್ಪಾಗಿದ್ದರೂ ಒಳಗೆ ಇದರ ಮಾಂಸವು ಬಿಳಿ, ರಸಭರಿತ ಮತ್ತು ಸಿಹಿಯಾಗಿರುತ್ತದೆ.

ಆರೋಗ್ಯದ ಗುಟ್ಟು:
• ಇದರ ಗಾಢ ಬಣ್ಣಕ್ಕೆ ಕಾರಣವಾಗಿರುವ ಆಂಥೋಸಯಾನಿನ್ ಗಳು ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳಾಗಿವೆ. ಇವು ದೇಹವನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಿ, ದೀರ್ಘಕಾಲೀನ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ.
• ಹೃದಯದ ಆರೋಗ್ಯವನ್ನು ಕಾಪಾಡಲು ಮತ್ತು ಕೋಶಗಳ ಕಾರ್ಯಕ್ಷಮತೆ ಸುಧಾರಿಸಲು ಸಹ ಇವು ಸಹಾಯ ಮಾಡುತ್ತವೆ.
• ತೂಕ ನಿಯಂತ್ರಣಕ್ಕೂ ಸಹಕಾರಿ
• ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳನ್ನು ಕಾಪಾಡಿಕೊಳ್ಳಲು ಪ್ರಮುಖ ಪಾತ್ರ ವಹಿಸುತ್ತದೆ.
• ಈ ಹಣ್ಣಿನಲ್ಲ ವಿಟಮಿನ್ ಸಿ ಮತ್ತು ಸಸ್ಯ ಆಧಾರಿತ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
• ಸೋಂಕುಗಳ ವಿರುದ್ಧ ದೇಹದ ಪ್ರತಿರೋಧ ಶಕ್ತಿ ಬಲಪಡಿಸುವುದರ ಜೊತೆಗೆ ಚರ್ಮದ ಆರೋಗ್ಯ ಸಹಾಕಾರಿ.
• ಪೊಟ್ಯಾಸಿಯಮ್ ಮತ್ತು ಫ್ಲೇವನಾಯ್ಡ್ ಗಳಿಂದ ಸಮೃದ್ಧವಾಗಿರುವ ಕಪ್ಪು ವಜ್ರದ ಸೇಬುಗಳು ಹೃದಯದ ಆರೋಗ್ಯಕ್ಕೂ ಲಾಭಕಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

6 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

23 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago