ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ 28 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 441 ಕಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಿ.ಎಂ.ಬೇವಿನಮರದ ಮಾಹಿತಿ ನೀಡಿದ್ದಾರೆ.
ಈ ಕಲಿಕಾ ಕೇಂದ್ರಗಳಲ್ಲಿ ಪಾಠಗಳು ನಡೆಸಲಾಗುತ್ತಿದೆ. ಕಲಿಕಾರ್ಥಿಗಳು ಕಲಿಕಾ ಕೇಂದ್ರಗಳಿಗೆ ಆಗಮಿಸಿ, ಅಕ್ಷರ ಕಲಿತರೆ, ಅವರ ಜೀವನದಲ್ಲಿ ಅಮೂಲ್ಯವಾದ ಬದಲಾವಣೆ ಕಾಣಲು ಸಾಧ್ಯವಿದೆ ಎಂದರು. ಕಾರ್ಯಕ್ರಮದಡಿ ಕೆಲಸ ಮಾಡುತ್ತಿರುವ ಬೋಧಕರು, ಅನಕ್ಷರಸ್ಥರನ್ನು ಕಲಿಕಾ ಕೇಂದ್ರಗಳಿಗೆ ಆಗಮಿಸುವಂತೆ ಮಾಡಿ, ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಪ್ರತಿ ಅನಕ್ಷರಸ್ಥ ಕಲಿಕಾರ್ಥಿಗೆ ಬಾಳಿಗೆ ಬೆಳಕು, ಸವಿಬರಹ ಪುಸ್ತಕಗಳನ್ನು ನೀಡಲಾಗಿದೆ. ಕಲಿಕಾ ಸಾಮಗ್ರಿಗಳನ್ನು ಬಳಸಿಕೊಂಡು ಕಲಿಕಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಜ್ಞಾನದ ಮಟ್ಟ ಹೆಚ್ಚುವಂತೆ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…