ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ 28 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 441 ಕಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಿ.ಎಂ.ಬೇವಿನಮರದ ಮಾಹಿತಿ ನೀಡಿದ್ದಾರೆ.
ಈ ಕಲಿಕಾ ಕೇಂದ್ರಗಳಲ್ಲಿ ಪಾಠಗಳು ನಡೆಸಲಾಗುತ್ತಿದೆ. ಕಲಿಕಾರ್ಥಿಗಳು ಕಲಿಕಾ ಕೇಂದ್ರಗಳಿಗೆ ಆಗಮಿಸಿ, ಅಕ್ಷರ ಕಲಿತರೆ, ಅವರ ಜೀವನದಲ್ಲಿ ಅಮೂಲ್ಯವಾದ ಬದಲಾವಣೆ ಕಾಣಲು ಸಾಧ್ಯವಿದೆ ಎಂದರು. ಕಾರ್ಯಕ್ರಮದಡಿ ಕೆಲಸ ಮಾಡುತ್ತಿರುವ ಬೋಧಕರು, ಅನಕ್ಷರಸ್ಥರನ್ನು ಕಲಿಕಾ ಕೇಂದ್ರಗಳಿಗೆ ಆಗಮಿಸುವಂತೆ ಮಾಡಿ, ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಪ್ರತಿ ಅನಕ್ಷರಸ್ಥ ಕಲಿಕಾರ್ಥಿಗೆ ಬಾಳಿಗೆ ಬೆಳಕು, ಸವಿಬರಹ ಪುಸ್ತಕಗಳನ್ನು ನೀಡಲಾಗಿದೆ. ಕಲಿಕಾ ಸಾಮಗ್ರಿಗಳನ್ನು ಬಳಸಿಕೊಂಡು ಕಲಿಕಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಜ್ಞಾನದ ಮಟ್ಟ ಹೆಚ್ಚುವಂತೆ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ತಿಳಿಸಿದರು.
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…