ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ 28 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 441 ಕಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಿ.ಎಂ.ಬೇವಿನಮರದ ಮಾಹಿತಿ ನೀಡಿದ್ದಾರೆ.
ಈ ಕಲಿಕಾ ಕೇಂದ್ರಗಳಲ್ಲಿ ಪಾಠಗಳು ನಡೆಸಲಾಗುತ್ತಿದೆ. ಕಲಿಕಾರ್ಥಿಗಳು ಕಲಿಕಾ ಕೇಂದ್ರಗಳಿಗೆ ಆಗಮಿಸಿ, ಅಕ್ಷರ ಕಲಿತರೆ, ಅವರ ಜೀವನದಲ್ಲಿ ಅಮೂಲ್ಯವಾದ ಬದಲಾವಣೆ ಕಾಣಲು ಸಾಧ್ಯವಿದೆ ಎಂದರು. ಕಾರ್ಯಕ್ರಮದಡಿ ಕೆಲಸ ಮಾಡುತ್ತಿರುವ ಬೋಧಕರು, ಅನಕ್ಷರಸ್ಥರನ್ನು ಕಲಿಕಾ ಕೇಂದ್ರಗಳಿಗೆ ಆಗಮಿಸುವಂತೆ ಮಾಡಿ, ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಪ್ರತಿ ಅನಕ್ಷರಸ್ಥ ಕಲಿಕಾರ್ಥಿಗೆ ಬಾಳಿಗೆ ಬೆಳಕು, ಸವಿಬರಹ ಪುಸ್ತಕಗಳನ್ನು ನೀಡಲಾಗಿದೆ. ಕಲಿಕಾ ಸಾಮಗ್ರಿಗಳನ್ನು ಬಳಸಿಕೊಂಡು ಕಲಿಕಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಜ್ಞಾನದ ಮಟ್ಟ ಹೆಚ್ಚುವಂತೆ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ತಿಳಿಸಿದರು.
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…