2024 ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ವಿಶ್ವ ಹವ್ಯಕ ಸಮ್ಮೇಳನ | ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ ಘೋಷಣೆ |

October 8, 2023
3:56 PM
2024 ರ ಡಿಸೆಂಬರ್ 27 ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ ಎಂದು ಹವ್ಯಕ ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ ತಿಳಿಸಿದ್ದಾರೆ.

2024 ರ ಡಿಸೆಂಬರ್ 27 ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ. ಮಲ್ಲೇಶ್ವರದ ಹವ್ಯಕ ಸಭಾಭವನದಲ್ಲಿ ಭಾನುವಾರ ನಡೆದ ಅಖಿಲ ಹವ್ಯಕ ಮಹಾಸಭಾದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ ಈ ವಿಷಯ ಪ್ರಕಟಿಸಿದರು.

ವಿಶ್ವ ಹವ್ಯಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಅಮೇರಿಕ, ಸಿಂಗಾಪುರ ಮತ್ತು ಇಂಗ್ಲೆಂಡಿನಲ್ಲಿ ಕೂಡಾ ಹವ್ಯಕ ಸಮಾವೇಶ ನಡೆಯಲಿದೆ. ಮುಂದಿನ 14 ತಿಂಗಳುಗಳಲ್ಲಿ ಹವ್ಯಕ ಮಹಾಸಭಾವು ಏರ್ಪಡಿಸಲಿರುವ ಸಮಾವೇಶಗಳನ್ನೂ ಅವರು ಇದೇ ಸಂದರ್ಭ ಪ್ರಕಟಿಸಿದರು.

ಸಮಾವೇಶಗಳು: ಹವ್ಯಕ ನ್ಯಾಯವಾದಿಗಳ ಸಮಾವೇಶ, ಹವ್ಯಕ ಮಹಿಳಾ ಸಮಾವೇಶ, ಹವ್ಯಕ ಶಿಕ್ಷಕರ ಸಮಾವೇಶ, ಹವ್ಯಕ ಉದ್ಯಮಿಗಳ ಸಮಾವೇಶ , ಹವ್ಯಕ ಕಲಾ ಉತ್ಸವ, ಹವ್ಯಕ ಸಂಗೀತ ಉತ್ಸವ, ಯಕ್ಷಗಾನ ಉತ್ಸವ, ವೈದಿಕ ಉತ್ಸವ, ಗಾಯತ್ರಿ ಮಹೋತ್ಸವ, ಶಂಕರ ಸ್ಮರಣ, ಸಂಸ್ಕಾರೋತ್ಸವ, ಹವ್ಯಕ ವಾಣಿಜ್ಯ ಸಮಾವೇಶ, ಹವ್ಯಕ ಭಾಷಾ ಸಮಾವೇಶ, ಹವ್ಯಕ ಸಾಹಿತ್ಯ ಸಮಾವೇಶ, ಹವ್ಯಕ ಪತ್ರಕರ್ತರ ಸಮಾವೇಶ, ತಾಳಮದ್ದಳೆ ಸಪ್ತಾಹ, ಹವ್ಯಕ ಕ್ರೀಡೋತ್ಸವ, ಹವ್ಯಕ ಹೈನುಗಾರರ ಸಮಾವೇಶಗಳು ನಡೆಯಲಿವೆ.

ಎಲೆಚುಕ್ಕಿ ರೋಗದ ಸಮಸ್ಯೆ: ಅಡಿಕ ಕೃಷಿಯಲ್ಲೇ ತೊಡಗಿರುವ ಹವ್ಯಕರು ಎಲೆಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾಗಿದ್ದಾರೆ ಎಂದು ಸರ್ವಸದಸ್ಯರ ಸಭೆಯಲ್ಲಿ ಅನೇಕ ಸದಸ್ಯರು ಕಳವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಾ.ಗಿರಿಧರ ಕಜೆ ಅವರು, ಹವ್ಯಕ ಮಹಾಸಭಾ ವತಿಯಿಂದ ಹವ್ಯಕ ಕೃಷಿಕರ ಸಮಾವೇಶ ಏರ್ಪಡಿಸಲಾಗುವುದು. ಇದಕ್ಕೆ ವಿಜ್ಞಾನಿಗಳನ್ನೂ ಆಹ್ವಾನಿಸಿ ಈ ಸಮಸ್ಯೆಗೆ ಮಾರ್ಗೋಪಾಯಗಳನ್ನು ಕಂಡುಹಿಡಿಯಲು ಯತ್ನಿಸಲಾಗುವುದು
ಎಂದರು.

ಬೆಳಕೆ ನಿವೇಶನ ಮತ್ತು ಅಭಿವೃದ್ಧಿ: ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಶಿರೂರಿನ ಮಂಜುನಾಥ ಬಿಲ್ಲವ ಮತ್ತು ಕುಟುಂಬದವರು ಸೇವಾರೂಪದಲ್ಲಿ ನೀಡಿರುವ ಒಂದು ಎಕರೆ ಜಾಗದಲ್ಲಿ ಸಭಾಂಗಣ ನಿರ್ಮಿಸಲಾಗುವುದು ಎಂದರು. ಬೆಂಗಳೂರಿನ ಚಿಕ್ಕಪೇಟೆ ಮತ್ತು ಕಾಮರಾಜ್ ರಸ್ತೆಯಲ್ಲಿ ಮಹಾಸಭಾ ಅಧೀನಕ್ಕೆ ಬರಲಿರುವ ನಿವೇಶನಗಳಲ್ಲಿ ಕಟ್ಟಡ ನಿರ್ಮಿಸಿ ಹವ್ಯಕ ಸಮುದಾಯಕ್ಕೆ ಅನುಕೂಲಕರವನ್ನಾಗಿ ಮಾಡಲಾಗುವುದು ಎಂದು ಡಾ. ಕಜೆ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror