ಸುದ್ದಿಗಳು

2024 ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ವಿಶ್ವ ಹವ್ಯಕ ಸಮ್ಮೇಳನ | ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ ಘೋಷಣೆ |

Share

2024 ರ ಡಿಸೆಂಬರ್ 27 ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ. ಮಲ್ಲೇಶ್ವರದ ಹವ್ಯಕ ಸಭಾಭವನದಲ್ಲಿ ಭಾನುವಾರ ನಡೆದ ಅಖಿಲ ಹವ್ಯಕ ಮಹಾಸಭಾದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ ಈ ವಿಷಯ ಪ್ರಕಟಿಸಿದರು.

Advertisement

ವಿಶ್ವ ಹವ್ಯಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಅಮೇರಿಕ, ಸಿಂಗಾಪುರ ಮತ್ತು ಇಂಗ್ಲೆಂಡಿನಲ್ಲಿ ಕೂಡಾ ಹವ್ಯಕ ಸಮಾವೇಶ ನಡೆಯಲಿದೆ. ಮುಂದಿನ 14 ತಿಂಗಳುಗಳಲ್ಲಿ ಹವ್ಯಕ ಮಹಾಸಭಾವು ಏರ್ಪಡಿಸಲಿರುವ ಸಮಾವೇಶಗಳನ್ನೂ ಅವರು ಇದೇ ಸಂದರ್ಭ ಪ್ರಕಟಿಸಿದರು.

ಸಮಾವೇಶಗಳು: ಹವ್ಯಕ ನ್ಯಾಯವಾದಿಗಳ ಸಮಾವೇಶ, ಹವ್ಯಕ ಮಹಿಳಾ ಸಮಾವೇಶ, ಹವ್ಯಕ ಶಿಕ್ಷಕರ ಸಮಾವೇಶ, ಹವ್ಯಕ ಉದ್ಯಮಿಗಳ ಸಮಾವೇಶ , ಹವ್ಯಕ ಕಲಾ ಉತ್ಸವ, ಹವ್ಯಕ ಸಂಗೀತ ಉತ್ಸವ, ಯಕ್ಷಗಾನ ಉತ್ಸವ, ವೈದಿಕ ಉತ್ಸವ, ಗಾಯತ್ರಿ ಮಹೋತ್ಸವ, ಶಂಕರ ಸ್ಮರಣ, ಸಂಸ್ಕಾರೋತ್ಸವ, ಹವ್ಯಕ ವಾಣಿಜ್ಯ ಸಮಾವೇಶ, ಹವ್ಯಕ ಭಾಷಾ ಸಮಾವೇಶ, ಹವ್ಯಕ ಸಾಹಿತ್ಯ ಸಮಾವೇಶ, ಹವ್ಯಕ ಪತ್ರಕರ್ತರ ಸಮಾವೇಶ, ತಾಳಮದ್ದಳೆ ಸಪ್ತಾಹ, ಹವ್ಯಕ ಕ್ರೀಡೋತ್ಸವ, ಹವ್ಯಕ ಹೈನುಗಾರರ ಸಮಾವೇಶಗಳು ನಡೆಯಲಿವೆ.

ಎಲೆಚುಕ್ಕಿ ರೋಗದ ಸಮಸ್ಯೆ: ಅಡಿಕ ಕೃಷಿಯಲ್ಲೇ ತೊಡಗಿರುವ ಹವ್ಯಕರು ಎಲೆಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾಗಿದ್ದಾರೆ ಎಂದು ಸರ್ವಸದಸ್ಯರ ಸಭೆಯಲ್ಲಿ ಅನೇಕ ಸದಸ್ಯರು ಕಳವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಾ.ಗಿರಿಧರ ಕಜೆ ಅವರು, ಹವ್ಯಕ ಮಹಾಸಭಾ ವತಿಯಿಂದ ಹವ್ಯಕ ಕೃಷಿಕರ ಸಮಾವೇಶ ಏರ್ಪಡಿಸಲಾಗುವುದು. ಇದಕ್ಕೆ ವಿಜ್ಞಾನಿಗಳನ್ನೂ ಆಹ್ವಾನಿಸಿ ಈ ಸಮಸ್ಯೆಗೆ ಮಾರ್ಗೋಪಾಯಗಳನ್ನು ಕಂಡುಹಿಡಿಯಲು ಯತ್ನಿಸಲಾಗುವುದು
ಎಂದರು.

ಬೆಳಕೆ ನಿವೇಶನ ಮತ್ತು ಅಭಿವೃದ್ಧಿ: ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಶಿರೂರಿನ ಮಂಜುನಾಥ ಬಿಲ್ಲವ ಮತ್ತು ಕುಟುಂಬದವರು ಸೇವಾರೂಪದಲ್ಲಿ ನೀಡಿರುವ ಒಂದು ಎಕರೆ ಜಾಗದಲ್ಲಿ ಸಭಾಂಗಣ ನಿರ್ಮಿಸಲಾಗುವುದು ಎಂದರು. ಬೆಂಗಳೂರಿನ ಚಿಕ್ಕಪೇಟೆ ಮತ್ತು ಕಾಮರಾಜ್ ರಸ್ತೆಯಲ್ಲಿ ಮಹಾಸಭಾ ಅಧೀನಕ್ಕೆ ಬರಲಿರುವ ನಿವೇಶನಗಳಲ್ಲಿ ಕಟ್ಟಡ ನಿರ್ಮಿಸಿ ಹವ್ಯಕ ಸಮುದಾಯಕ್ಕೆ ಅನುಕೂಲಕರವನ್ನಾಗಿ ಮಾಡಲಾಗುವುದು ಎಂದು ಡಾ. ಕಜೆ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ

2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…

11 hours ago

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…

11 hours ago

ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,  ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…

15 hours ago

ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ

ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…

15 hours ago

ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…

16 hours ago

ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…

19 hours ago