Advertisement
ಸುದ್ದಿಗಳು

2024 ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ವಿಶ್ವ ಹವ್ಯಕ ಸಮ್ಮೇಳನ | ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ ಘೋಷಣೆ |

Share

2024 ರ ಡಿಸೆಂಬರ್ 27 ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ. ಮಲ್ಲೇಶ್ವರದ ಹವ್ಯಕ ಸಭಾಭವನದಲ್ಲಿ ಭಾನುವಾರ ನಡೆದ ಅಖಿಲ ಹವ್ಯಕ ಮಹಾಸಭಾದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ ಈ ವಿಷಯ ಪ್ರಕಟಿಸಿದರು.

ವಿಶ್ವ ಹವ್ಯಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಅಮೇರಿಕ, ಸಿಂಗಾಪುರ ಮತ್ತು ಇಂಗ್ಲೆಂಡಿನಲ್ಲಿ ಕೂಡಾ ಹವ್ಯಕ ಸಮಾವೇಶ ನಡೆಯಲಿದೆ. ಮುಂದಿನ 14 ತಿಂಗಳುಗಳಲ್ಲಿ ಹವ್ಯಕ ಮಹಾಸಭಾವು ಏರ್ಪಡಿಸಲಿರುವ ಸಮಾವೇಶಗಳನ್ನೂ ಅವರು ಇದೇ ಸಂದರ್ಭ ಪ್ರಕಟಿಸಿದರು.

ಸಮಾವೇಶಗಳು: ಹವ್ಯಕ ನ್ಯಾಯವಾದಿಗಳ ಸಮಾವೇಶ, ಹವ್ಯಕ ಮಹಿಳಾ ಸಮಾವೇಶ, ಹವ್ಯಕ ಶಿಕ್ಷಕರ ಸಮಾವೇಶ, ಹವ್ಯಕ ಉದ್ಯಮಿಗಳ ಸಮಾವೇಶ , ಹವ್ಯಕ ಕಲಾ ಉತ್ಸವ, ಹವ್ಯಕ ಸಂಗೀತ ಉತ್ಸವ, ಯಕ್ಷಗಾನ ಉತ್ಸವ, ವೈದಿಕ ಉತ್ಸವ, ಗಾಯತ್ರಿ ಮಹೋತ್ಸವ, ಶಂಕರ ಸ್ಮರಣ, ಸಂಸ್ಕಾರೋತ್ಸವ, ಹವ್ಯಕ ವಾಣಿಜ್ಯ ಸಮಾವೇಶ, ಹವ್ಯಕ ಭಾಷಾ ಸಮಾವೇಶ, ಹವ್ಯಕ ಸಾಹಿತ್ಯ ಸಮಾವೇಶ, ಹವ್ಯಕ ಪತ್ರಕರ್ತರ ಸಮಾವೇಶ, ತಾಳಮದ್ದಳೆ ಸಪ್ತಾಹ, ಹವ್ಯಕ ಕ್ರೀಡೋತ್ಸವ, ಹವ್ಯಕ ಹೈನುಗಾರರ ಸಮಾವೇಶಗಳು ನಡೆಯಲಿವೆ.

ಎಲೆಚುಕ್ಕಿ ರೋಗದ ಸಮಸ್ಯೆ: ಅಡಿಕ ಕೃಷಿಯಲ್ಲೇ ತೊಡಗಿರುವ ಹವ್ಯಕರು ಎಲೆಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾಗಿದ್ದಾರೆ ಎಂದು ಸರ್ವಸದಸ್ಯರ ಸಭೆಯಲ್ಲಿ ಅನೇಕ ಸದಸ್ಯರು ಕಳವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಾ.ಗಿರಿಧರ ಕಜೆ ಅವರು, ಹವ್ಯಕ ಮಹಾಸಭಾ ವತಿಯಿಂದ ಹವ್ಯಕ ಕೃಷಿಕರ ಸಮಾವೇಶ ಏರ್ಪಡಿಸಲಾಗುವುದು. ಇದಕ್ಕೆ ವಿಜ್ಞಾನಿಗಳನ್ನೂ ಆಹ್ವಾನಿಸಿ ಈ ಸಮಸ್ಯೆಗೆ ಮಾರ್ಗೋಪಾಯಗಳನ್ನು ಕಂಡುಹಿಡಿಯಲು ಯತ್ನಿಸಲಾಗುವುದು
ಎಂದರು.

ಬೆಳಕೆ ನಿವೇಶನ ಮತ್ತು ಅಭಿವೃದ್ಧಿ: ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಶಿರೂರಿನ ಮಂಜುನಾಥ ಬಿಲ್ಲವ ಮತ್ತು ಕುಟುಂಬದವರು ಸೇವಾರೂಪದಲ್ಲಿ ನೀಡಿರುವ ಒಂದು ಎಕರೆ ಜಾಗದಲ್ಲಿ ಸಭಾಂಗಣ ನಿರ್ಮಿಸಲಾಗುವುದು ಎಂದರು. ಬೆಂಗಳೂರಿನ ಚಿಕ್ಕಪೇಟೆ ಮತ್ತು ಕಾಮರಾಜ್ ರಸ್ತೆಯಲ್ಲಿ ಮಹಾಸಭಾ ಅಧೀನಕ್ಕೆ ಬರಲಿರುವ ನಿವೇಶನಗಳಲ್ಲಿ ಕಟ್ಟಡ ನಿರ್ಮಿಸಿ ಹವ್ಯಕ ಸಮುದಾಯಕ್ಕೆ ಅನುಕೂಲಕರವನ್ನಾಗಿ ಮಾಡಲಾಗುವುದು ಎಂದು ಡಾ. ಕಜೆ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

13 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

18 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 day ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago