ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

June 10, 2026
6:32 AM
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಹಲಸು ಮತ್ತು ಹುಣಸೆ ಬೆಳೆಗಳ ಅಭಿವೃದ್ಧಿಗಾಗಿ ರಾಷ್ಟ್ರೀಯ ಮಂಡಳಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಹಲಸು ಮತ್ತು ಹುಣಸೆ ಬೆಳೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಮಟ್ಟದ ವಿಶೇಷ ಮಂಡಳಿಯನ್ನು (National Board) ಸ್ಥಾಪಿಸಬೇಕು ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇ ಗೌಡ ಆಗ್ರಹಿಸಿದ್ದಾರೆ.

ಮಾವು ಮತ್ತು ಹಲಸು ಮೇಳದ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ರೈತರು ಹಾಗೂ ಉತ್ಪಾದಕರೊಂದಿಗೆ ಸಂವಾದ ನಡೆಸಿದ ದೇವೇಗೌಡರು, ಮೇಳವನ್ನು ಮಾವು-ಹಲಸು ಮೇಳ ಎಂದು ಪ್ರಚಾರ ಮಾಡಲಾಗಿದ್ದರೂ, ಹಲಸಿನ ಪ್ರಾತಿನಿಧ್ಯ ನಿರೀಕ್ಷಿತ ಮಟ್ಟದಲ್ಲಿ ಕಾಣಿಸಲಿಲ್ಲ ಎಂದು ಅಭಿಪ್ರಾಯಪಟ್ಟರು.

ಹಲಸು, ಹುಣಸೆ ಹಾಗೂ ಇತರೆ ಸಾಂಪ್ರದಾಯಿಕ ಹಣ್ಣಿನ ಬೆಳೆಗಳು ಗ್ರಾಮೀಣ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಆದರೆ ಈ ಬೆಳೆಗಳಿಗೆ ತೆಂಗು, ಕಾಫಿ ಅಥವಾ ಮಸಾಲೆ ಬೆಳೆಗಳ ಮಾದರಿಯ ಪ್ರತ್ಯೇಕ ಅಭಿವೃದ್ಧಿ ಸಂಸ್ಥೆಗಳು ಇಲ್ಲದಿರುವುದರಿಂದ ರೈತರಿಗೆ ಸೂಕ್ತ ಪ್ರೋತ್ಸಾಹ ದೊರೆಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ದೇವೇಗೌಡರು ಈ ಹಿಂದೆಯೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹಲಸು, ಹುಣಸೆ ಹಾಗೂ ನೇರಳೆ ಹಣ್ಣುಗಳ ಅಭಿವೃದ್ಧಿಗಾಗಿ ರಾಷ್ಟ್ರೀಯ ಮಂಡಳಿ ಸ್ಥಾಪಿಸುವಂತೆ ಮನವಿ ಮಾಡಿದ್ದರು. ಈ ಬೆಳೆಗಳು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಗ್ರಾಮೀಣ ಉದ್ಯೋಗ ಹಾಗೂ ಸಂಸ್ಕರಣಾ ಕೈಗಾರಿಕೆಗಳಿಗೆ ಅಪಾರ ಅವಕಾಶಗಳನ್ನು ಹೊಂದಿವೆ ಎಂದು ಅವರು ಒತ್ತಿ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮೌಲ್ಯವರ್ಧನೆಗೆ ಒತ್ತು ಅಗತ್ಯ :  ಹಲಸು ಮತ್ತು ಹುಣಸೆಯನ್ನು ಕೇವಲ ತಾಜಾ ಹಣ್ಣಾಗಿ ಮಾತ್ರವಲ್ಲದೆ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ಪರಿಚಯಿಸುವ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಸಂಶೋಧನೆ, ಸಂಸ್ಕರಣೆ, ಮಾರುಕಟ್ಟೆ ಅಭಿವೃದ್ಧಿ ಹಾಗೂ ರಫ್ತು ಉತ್ತೇಜನಕ್ಕೆ ರಾಷ್ಟ್ರೀಯ ಮಟ್ಟದ ಸಂಸ್ಥೆ ನೆರವಾಗಲಿದೆ ಎಂದು ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಹಲಸು ಮತ್ತು ಹುಣಸೆ ಪ್ರಮುಖ ಬೆಳೆಗಳಾಗಿದ್ದು, ರೈತರಿಗೆ ಹೆಚ್ಚಿನ ಆದಾಯ ತಂದುಕೊಡುವ ಸಾಮರ್ಥ್ಯ ಹೊಂದಿವೆ. ಸೂಕ್ತ ನೀತಿ ಬೆಂಬಲ ದೊರೆತರೆ ಈ ವಲಯವು ಮತ್ತಷ್ಟು ಬೆಳವಣಿಗೆ ಕಾಣಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Former Prime Minister H.D. Deve Gowda, during his visit to the Mango and Jackfruit Mela in Bengaluru, urged the Union Government to establish a National Board for jackfruit and tamarind. He emphasized the need for dedicated institutional support to promote cultivation, processing, value addition, marketing and exports of these traditional fruit crops.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror