ಮಾಜಿ ಪಿಎಂ ಎಚ್.ಡಿ ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸ್ತೀನಿ. ಐದು ವರ್ಷಕ್ಕೆ ಮಾಡ್ತೀನೋ, ಹತ್ತು ವರ್ಷಕ್ಕೆ ಮಾಡ್ತೀನೋ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ ಎಂದು ಚಾಲೆಂಜ್ ಹಾಕಿದರು.
ಕಾಂಗ್ರೆಸ್ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರ್ಕಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸ್ತೀವಿ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ ಎಂದರು.
ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ನಿಲ್ಲಲ್ಲ ಅಂದ್ರು ನಾವು ಬಿಡಲ್ಲ. ಲೋಕಸಭೆ ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ಲೋಕಸಭೆಗೆ ಕಳುಹಿಸುತ್ತೇವೆ. ಹಾಸನ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣನೇ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…