ಮಾಜಿ ಪಿಎಂ ಎಚ್.ಡಿ ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸ್ತೀನಿ. ಐದು ವರ್ಷಕ್ಕೆ ಮಾಡ್ತೀನೋ, ಹತ್ತು ವರ್ಷಕ್ಕೆ ಮಾಡ್ತೀನೋ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ ಎಂದು ಚಾಲೆಂಜ್ ಹಾಕಿದರು.
ಕಾಂಗ್ರೆಸ್ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್ಗೆ ಕರ್ಕಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸ್ತೀವಿ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ ಎಂದರು.
ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ನಿಲ್ಲಲ್ಲ ಅಂದ್ರು ನಾವು ಬಿಡಲ್ಲ. ಲೋಕಸಭೆ ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ಲೋಕಸಭೆಗೆ ಕಳುಹಿಸುತ್ತೇವೆ. ಹಾಸನ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣನೇ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…